Connect with us

Dvgsuddi Kannada | online news portal | Kannada news online

ಅಡಿಕೆ ದುಡ್ಡು ಕಳ್ಳತನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ; ನನ್ನ ತೇಜೋವಧೆ ಯತ್ನ; 50 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ; ಸಿದ್ದೇಶ್ವರ್

IMG 20240114 193838

ದಾವಣಗೆರೆ

ಅಡಿಕೆ ದುಡ್ಡು ಕಳ್ಳತನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ; ನನ್ನ ತೇಜೋವಧೆ ಯತ್ನ; 50 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ; ಸಿದ್ದೇಶ್ವರ್

ದಾವಣಗೆರೆ: ಅಡಿಕೆ ದುಡ್ಡು ಕಳ್ಳತನ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ತೇಜೋವಧೆ ಪ್ರಯತ್ನ ನಡೆಯುತ್ತಿದೆ. ನಾನು ಯಾವುದೇ ಹವಾಲಾ ಹಣ ವರ್ಗಾವಣೆ ಮಾಡಿಲ್ಲ. ಯಾವುದೇ ಆಧಾರವಿಲ್ಲದೇ ಆರೋಪ ಮಾಡಿದರೆ ಸುಮ್ಮನಿರಲ್ಲ ಎಂದು ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಕಿಡಿಕಾರಿದರು.

ಜಿಎಂಐಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೇ ವಿಷಯಕ್ಕೆ ಜ. 16ರಂದು ಆವಣಗೆರೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುವುದಾಗಿ ಮಾಹಿತಿ ಇದೆ. ಪ್ರತಿಭಟನೆ ವೇಳೆ ನಿಂದನೆ ನಡೆಸಿದರೆ 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ‌ ನೀಡಿದರು.

2024ರ ಜನವರಿ 7ರಂದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಭೀಮನಸಮುದ್ರದ ಉಮೇಶ್ ಹಾಗೂ ಮಲ್ಲಿಕಾರ್ಜುನ್ ಎಂಬುವವರು ದೂರು ಕೊಟ್ಟಿದ್ದರು. ಆರೋಪಿ ಸ್ವಾಮಿ ಹಾಗೂ ಅನುಪಮಾ ಎಂಬಾಕೆಯಿಂದ 93 ಲಕ್ಷ ರೂ. ನಗದು, ಬಂಗಾರ, ಮೊಬೈಲ್ ಸೇರಿದಂತೆ ಸುಮಾರು 97 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇದೆ. ಈ ಪ್ರಕರಣದಲ್ಲಿ ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top