ದಾವಣಗೆರೆ: ಬುದ್ಧಿಮಾಂದ್ಯ ವಿವಾಹಿತ ಮಹಿಳೆಗೆ ಮತ್ತು ಬರುವ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ.
ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ತೊಗರಿ ಹೊಲದಲ್ಲಿ ಪ್ರಜ್ಞಾಹೀನ ಸಸ್ಥೀತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಈ ಕೃತ್ಯ ನಡೆದಿದೆ.
ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮ್ಯಾಸರಹಳ್ಳಿವ ಪ್ರಭು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮತ್ತೊಬ್ಬ ಆರೋಪಿ ಕುಂದುವಾಡದ ಕಿರಣ್ ತಲೆ ಮರೆಸಿಕೊಂಡಿದ್ದಾನೆ.



