ದಾವಣಗೆರೆ: ಬರಗಾಲದಲ್ಲೂ ಕಷ್ಟಪಟ್ಟು ಬೆಳೆದ ಜಿಲ್ಲೆಯ ಹರಿಹರ ತಾಲ್ಲೂಕಿನ ಎರೆ ಹೊಸಳ್ಳಿ ಗ್ರಾಮದ ರೈತ ಮಹಿಳೆಯೊಬ್ಬರ 80 ಸಾವಿರ ಮಲ್ಯದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕಳ್ಳತನ ಮಾಡಿ ಪರಾರಿಯಾದ ಘಟನೆ ನಡೆದಿದೆ.
ಅಡಿಕೆ, ತೆಂಗಿನಕಾಯಿ ಕಳ್ಳತನ ಮಾಡುತ್ತಿದ್ದ ಕದೀಮರು, ಈಗ ದರ ಏರಿಕೆಯಾದ ಬೆಳ್ಳುಳ್ಳಿಯನ್ನು ಕದಿಯಲು ಶುರು ಮಾಡಿದ್ದಾರೆ. ಗ್ರಾಮದ ಚಂದ್ರಮ್ಮ ಎರಡು ಎಕರೆ ಜಮೀನಿನಲ್ಲಿ ಗುತ್ತಿಗೆ ಪಡೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳ್ಳುಳ್ಳಿ ಬೆಳೆದಿದ್ದರು. ಯಾರೋ ಕಳ್ಳರು ರಾತ್ರೋರಾತ್ರಿ 80 ಸಾವಿರ ಮೌಲ್ಯದ 2 ಕ್ವಿಂಟಲ್ ತೂಕದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕದ್ದಿದ್ದಾರೆ. ಗ್ರಾಮದಲ್ಲಿ ಜಾತ್ರೆಯ ಸಮಯದಲ್ಲಿ ಈ ಘಟನೆ ನಡೆದಿದೆ.



