ದಾವಣಗೆರೆ: ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ; 3.11 ಲಕ್ಷ ಮೌಲ್ಯದ 400 ವಾಟರ್ ಕೂಲರ್ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬಾಂಬೆಯಿಂದ ದಾವಣಗೆರೆಗೆ ಪೂರೈಕೆ ಮಾಡಿದ 400 ವಾಟರ್ ಕೂಲರ್‍ ಗಳ ಇ-ವೇಬಿಲ್ ನಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಮುಂಭಾಗದದಲ್ಲಿ ವಾಹನದೊಂದಿಗೆ ವಸ್ತುಗಳ ಪರಿಶೀಲನೆ ನಡೆಸಿದರು. ವಾಟರ್ ಕೂಲರ್ ಸಾಗಣೆ ಮಾಡಿದ ವಾಹನಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳು ಮಾರ್ಚ್ 22 ರಂದು ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತುವೇಳೆ ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ರೂ.3,11,520 ಮೌಲ್ಯದ 400 ವಾಟರ್ ಕೂಲರ್‍ಗಳನ್ನು ಎರಡು ವಾಹನಗಳಲ್ಲಿ ಬಾಂಬೆಯಿಂದ ದಾವಣಗೆರೆ ಹರಿಹೊಂ ಎಂಟರ್‍ ಪ್ರೈಸ್ಸ್ ಪೂರೈಕೆಯಾಗಿದ್ದು ದಾವಣಗೆರೆಯಲ್ಲಿ ವಾಹನ ತಪಾಸಣೆ ಮಾಡುವುದಕ್ಕಿಂತ 3 ಗಂಟೆ ಮೊದಲು ಮಾತ್ರ ಇ–ವೇಬಿಲ್ ಸೃಜನೆಯಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇದು ಅನುಮಾನಾಸ್ಪದವಾಗಿದೆ.

ಬಾಂಬೆಯಿಂದ ದಾವಣಗೆರೆಗೆ ಆಗಮಿಸಲು ಕನಿಷ್ಠ 18 ಗಂಟೆಗಳ ಕಾಲ ಪ್ರಯಾಣದ ಅವಧಿಯಾಗಲಿದೆ. ವಾಹನ ವಶಕ್ಕೆ ಪಡೆಯುವುದಕ್ಕಿಂತ ಮೂರು ಗಂಟೆ ಮೊದಲು ಆನ್‍ಲೈನ್ ಬಿಲ್ ಸೃಜನೆ ಮಾಡಿರುವುದು ಕಂಡು ಬಂದಿದ್ದು ಇದು ಜಿ.ಎಸ್.ಟಿ. ನಿಯಮದ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಮಾರ್ಚ್ 22 ರಂದು ಇವುಗಳನ್ನು ವಶಕ್ಕೆ ಪಡೆದು ಎಫ್.ಎಸ್.ಟಿ.ಗೆ ತನಿಖೆಗಾಗಿ ವಹಿಸಲಾಗಿತ್ತು. ಆದರೆ, ಸ್ಪಷ್ಟನೆ ನೀಡದ ಕಾರಣ ಇದು ಚುನಾವಣಾ ಸಂದರ್ಭದಲ್ಲಿ ವಿತರಣೆಗೆ ಬಳಸಲು ಉದ್ದೇಶಿಸಿರಬೇಕೆಂದು ಅನುಮಾನಿಸಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿಯವರು ಸದರಿ ಸಂಸ್ಥೆಯ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿರುತ್ತಾರೆ. ಈ ಪರಿಶೀಲನೆ ವೇಳೆ ದಾವಣಗೆರೆ ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಚುನಾವಣಾಧಿಕಾರಿ ರೇಣುಕಾ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಮಂಜುನಾಥ್, ವಾಣಿಜ್ಯ ತೆರಿಗೆ ಇಲಾಖೆ ತನಿಖಾಧಿಕಾರಿ ನಟರಾಜ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *