ದಾವಣಗೆರೆ: ಆಭರಣ ತಯಾರಿಸಿ ಕೊಡುವುದಾಗಿ ವಂಚನೆ;12.07 ಲಕ್ಷ ಮೌಲ್ಯದ ಚಿನ್ನ ವಶ, ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಚಿನ್ನಾಭರಣ ಅಂಗಡಿ ಮಾಲೀಕರಿಗೆ ಆಭರಣ ತಯಾರು ಮಾಡಿಕೊಡುವುದಾಗಿ ನಂಬಿಸಿ 12,07500 ರಾಪಾಯಿ ಮೌಲ್ಯದ ಬಂಗಾರ ತಗೆದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಸವನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ನಗರದ ಬಾರ್ ಲೈನ್ ನಲ್ಲಿ ವಾಸವಿದ್ದ ಗೌರ್ ಅದಕ್ (37) ಎಂಬ ಬಂಗಾರ ಕೆಲಸಗಾರ, ಭರತ್ ಜ್ಯೂಯಲರಿ ಮಾಲೀಕರಾದ ವಿಜಯಕುಮಾರ್ ಅವರಿಗೆ ಸೇರಿದ 450 ಗ್ರಾಂ ಚಿನ್ನವನ್ನು ಅಭರಣ ಮಾಡಿಕೊಡುವುದಾಗಿ ನಂಬಿಸಿ ಪಡೆದು ಎಸ್ಕೇಪ್ ಆಗಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ‌ 406 ಹಾಗೂ 420 ಅಡಿ ಕೇಸ್ ದಾಖಲಿಸಿಕೊಳ್ಳಲಾಗಿತ್ತು.

ಬಸವನಗರ ಪೊಲೀಸರ್ ಆರೋಪಿ ಗೌರ್ ಅದಕ್ ನನ್ನು ಬಂಧಿಸಿದ್ದು, ಆರೋಪಿಯಿಂದ 12.07 ಲಕ್ಷ ಮೌಲ್ಯದ 450 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಕ್ಕೆ ಒಪ್ಪಿಸಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *