ದಾವಣಗೆರೆ: ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿ ಬಂಧನ; 67 ಸಾವಿರ ಮೌಲ್ಯದ ಚಿನ್ನ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಲ್ಯಾಣ ಮಂಟಪಗಳ ರೂಮ್ ಕೀ ಮುರಿದು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 67,000/-ರೂ ಬೆಲೆಯ 10.5 ಗ್ರಾಂ ತೂಕದ ಬಂಗಾರದ ಆಭರಣ ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಮೇ. 20 ರಂದು ಬೆಂಗಳೂರು ನಿವಾಸಿ ಸೌಮ್ಯ ಎಂಬುವವರು ದಾವಣಗೆರೆ ಕೆಇಬಿ ನೌಕರರ ಸಮುಧಾಯ ಭವನದಲ್ಲಿ ತಮ್ಮ
ಸಂಬಧಿಕರ ಮದುವೆಗೆ ಬಂದಿದ್ದು, ಮಧ್ಯಾಹ್ನ 12.30 ಗಂಟೆ ಸಮಯದಲ್ಲಿ ತಂಗಿದ್ದ ರೂಮಿನ ಬೀಗ ಹಾಕಿಕೊಂಡು ಮದುವೆ ಹಾಲ್‌ಗೆ ಹೋಗಿದ್ದರು. ಈ ವೇಳೆ ಯಾರೋ ಕಳ್ಳರು ರೂಮಿನ
ಬೀಗ ಮುರಿದು ಬಟ್ಟೆ ಬ್ಯಾಗಿನಲ್ಲಿ ಇಟ್ಟಿದ್ದ 12.5 ಗ್ರಾಂ ತೂಕದ ಬಂಗಾರದ ಆಭರಣ ಹಾಗು 3500/- ರೂ . ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಕೆಟಿಜೆ ನಗರ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಆರೋಪಿತ ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ನಿರೀಕ್ಷಕ ಸುನಿಲ್ ಕುಮಾರ್ ಹೆಚ್ ಎಸ್ ಹಾಗು ಪಿಎಸ್‌ಐ ಸಾಗರ ಅತ್ತರವಾಲಾ, ಎನ್.ಆರ್ ಕಾಟೆ ಹಾಗು ಸಿಬ್ಬಂದಿಗಳಾದ ಶಂಕರ್ ಜಾಧವ್, ಪ್ರಕಾಶ ಟಿ, ಎಮ್ ಮಂಜಪ್ಪ, ಶಿವರಾಜ್ ಎಮ್ ಎಸ್, ವೀರೇಶ ಕುಮಾರ ಹಾಗೂ ಪಿಸಿ ಗೀತಾ ಸಿ ಕೆ ಅವರನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ಈ ತಂಡವು ಮೇಲ್ಕಂಡ ಪ್ರಕರಣದ ಆರೋಪಿ ಶಾಂತಿ ನಗರ ವಾಸಿ ಕಿರಣ ನಾಯ್ಕ ಬಂಧಿಸಲಾಗಿದೆ. ಆರೋಪಿತನಿಂದ ಒಟ್ಟು 67,000/-ರೂ ಬೆಲೆಯ 10.5 ಗ್ರಾಂ ತೂಕದ ಬಂಗಾರದ ಆಭರಣ ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ
ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ವಿರುದ್ಧ ಈಗಾಗಲೇ ವಿದ್ಯಾ ನಗರ ಪೊಲೀಸ್ ಠಾಣೆ, ಬಡಾವಣೆ ಠಾಣೆ ಹಾಗೂಬಸವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇರುತ್ತವೆ. ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿವ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *