ದಾವಣಗೆರೆ: 10 ಲಕ್ಷ ಮೌಲ್ಯದ ಲಾರಿ ಕಳ್ಳತನ ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಆರೋಪಿ ಸಹಿತ ಸ್ವತ್ತನ್ನು ಜಿಲ್ಲಾ ಪೊಲೀಸರು ವಶ ಪಡೆಸಿಕೊಂಡಿದ್ದಾರೆ.
ಮೇ 21ರಂದು ರಾತ್ರಿ 8 ಹರಿಹರ ತಾಲ್ಲೂಕಿನ ಕಡರನಾಯಕನಹಳ್ಳಿ ಗ್ರಾಮದ ಇಟ್ಟಿಗೆ ಬಟ್ಟಿಯಲ್ಲಿ ನಿಲ್ಲಿಸಿದ್ದ 10 ಲಕ್ಷ ರೂ ಬೆಲೆ ಬಾಳುವ ಭರತ್ ಬೆಂಜ್ ಕಂಪನಿಯ ಲಾರಿ ಕಳ್ಳತನವಾದ ಬಗ್ಗೆ ಜೂ.1 ರಂದು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳಾದ ವಿಜಯಕುಮಾರ್ ಎಂ ಸಂತೋಷ ಮತ್ತು ಶ್ರೀ ಜಿ. ಮಂಜುನಾಥ ಜಿಲ್ಲೆ ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಶಾಂತ ಸಿದ್ದನಗೌಡ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪಿ.ಎಸ್.ಐ ಮಲೇಬೆನ್ನೂರು ರವರ ನೇತೃತ್ವದಲ್ಲಿ ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು.
ಈ ತಂಡ ಜೂ.1ರಂದು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ ಕೆಳಗಿನ ಮನಿ ಮತ್ತು ಸಿಬ್ಬಂದಿಯವರು ಮೇಲ್ಕಂಡ ಪ್ರಕರಣದಲ್ಲಿನ ಆರೋಪಿತನಾದ ಕೃಷ್ಣಪ್ಪ @ ಕೃಷ್ಣಪ್ಪ ಮಲ್ಲೂರು, 34 ವರ್ಷ, ಡ್ರೈವರ್ ಕೆಲಸ, ವಾಸ: ಗುಡ್ಡದ ಕಮಲಾಪುರ ಗ್ರಾಮ, ರಟ್ಟಿಹಳ್ಳಿ ತಾಲ್ಲೂಕ್, ಹಾವೇರಿ ಜಿಲ್ಲೆ ಈತನನ್ನು ಬಂಧಿಸಿದದ್ದಾರೆ.ಆರೋಪಿತನಿಂದ ಕಳುವು ಮಾಡಿದ್ದ 10 ಲಕ್ಷ ರೂ ಬೆಲೆಯ ಲಾರಿಯನ್ನು ಮತ್ತು ಹಾವೇರಿ ಜಿಲ್ಲೆ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆಯ 1 ಬೈಕ್ ಕಳವು ಪ್ರಕರಣವನ್ನು ಭೇದಿಸಿ20 ಸಾವಿರ ಬೆಲೆಯ ಕಬೈಕ್ನ್ನು ವಶಕ್ಕೆ ಪಡೆದಿದ್ದು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ
ಮೇಲ್ಕಂಡ ಪ್ರಕರಣದಲ್ಲಿ ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಆರೋಪಿತನನ್ನು ಪತ್ತೆ ಹಚ್ಚಿ ಕಳುವಾಗಿದ್ದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಹರಿಹರ ವೃತ್ತ ನಿರೀಕ್ಷಕರಾದ ಶ್ರೀ ಸುರೇಶ ಸಗರಿ ಮತ್ತು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ.ಸು) ಪ್ರಭು ಡಿ ಕೆಳಗಿನ ಮನಿ, ಸಿಬ್ಬಂದಿ ಲಕ್ಷ್ಮಣ, ರಾಜಶೇಖರ್, ಸಂತೋಷಕುಮಾರ್, ಮಲ್ಲಿಕಾರ್ಜುನ, ಜೀಪ್ ಚಾಲಕರಾದ ರಾಜಪ್ಪ, ಮುರುಳಿಧರ ಭಾಗಿಯಾಗಿದ್ದರಿ. ಈ ತಂಡಕ್ಕೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



