ದಾವಣಗೆರೆ: ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಾಕು ಏರಿದು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನ ಹಟ್ಟಿಯಲ್ಲಿ ನಡೆದಿದೆ. ಅಮಲಿಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆಯನ್ನ ಎಳೆದಾಡಿದ್ದು, ಆಕೆ ವಿರೋಧಿಸಿದ್ದಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ.
ಮಹಿಳೆ ಮನೆಯಲ್ಲಿ ಮಗುವಿಗೆ ಹಾಲುಣಿಸುವ ವೇಳೆ ಕುಡಿದ ಮತ್ತಲ್ಲಿದ್ದ ಅದೇ ಗ್ರಾಮದ ಕಾಟೇಶ ಎಂಬ ವ್ಯಕ್ತಿ ಮನೆಗೆ ನುಗ್ಗಿ, ಮಹಿಳೆಯನ್ನ ಎಳೆದಾಡಿದ್ದಾನೆ. ಮಹಿಳೆ ಪ್ರತಿರೋಧ ತೋರಿದ್ದರಿಂದ ಆಕೆಯ ಕುತ್ತಿಗೆ, ಎದೆ, ಕೈಗೆ ಚಾಕುವಿನಿಂದ ಇರಿದಿದ್ದಾನೆ. ಮಹಿಳೆ ಜೋರಾಗಿ ಕೂಗಿದ್ದರೀಂದ ನೆರೆಯವರು ಬಂದು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯಕ್ಕೆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಕಾಟೇಶಗಾಗಿ ಪೋಲಿಸರ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



