Connect with us

Dvgsuddi Kannada | online news portal | Kannada news online

ದಾವಣಗೆರೆ: 45 ಸಾವಿರ ರೂಪಾಯಿ ಮೌಲ್ಯದ ಅಲ್ಯೂಮಿನಿಯಂ ವೈರ್ ಕಳ್ಳತನ; 23 ವರ್ಷ ನಂತರ ಆರೋಪಿ ಬಂಧನ

crime sym

ದಾವಣಗೆರೆ

ದಾವಣಗೆರೆ: 45 ಸಾವಿರ ರೂಪಾಯಿ ಮೌಲ್ಯದ ಅಲ್ಯೂಮಿನಿಯಂ ವೈರ್ ಕಳ್ಳತನ; 23 ವರ್ಷ ನಂತರ ಆರೋಪಿ ಬಂಧನ

ದಾವಣಗೆರೆ: ವಿದ್ಯುತ್ ಕಂಬದ 45 ಸಾವಿರ ರೂಪಾಯಿ ಮೌಲ್ಯದ ಅಲ್ಯೂಮಿನಿಯಂ ವೈರ್ ಕದ್ದಿದ್ದವನನ್ನು 23 ವರ್ಷಗಳ ನಂತರ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

2001 ರ ಆ. 14 ರಂದು ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ 23 ವರ್ಷಗಳ ನಂತದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಾಂತಿನಗರ ನಿವಾಸಿ ಎಸ್.ಬಿ. ಪ್ರದೀಪ್ ಎಂಬುವನನ್ನು ಬಂಧಿಸಲಾಗಿದೆ. ಹರಿಹರ ತಾಲೂಕಿನ ಮಾಜೇನಹಳ್ಳಿ ಬಳಿ ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬದಲ್ಲಿದ್ದ 45 ಸಾವಿರ ರೂಪಾಯಿ ಬೆಲೆಯ 60 ಕೆಜಿ ಅಲ್ಯೂಮಿನಿಯಂ ವೈರ್ ಕಳ್ಳತನದ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ನಿವಾಸಿ ಎಸ್.ಬಿ. ಪ್ರದೀಪ್‌ನನ್ನು ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರ ಬಂದ ನಂತರ ಪ್ರದೀಪ್ ನ್ಯಾಯಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಎಸ್ ಪಿ ಉಮಾ ಪ್ರಶಾಂತ್ ಸೂಚನೆ ಆರೋಪಿ ಪತ್ತೆಗಾಗಿ ದಾವಣಗೆರೆ ಗ್ರಾಮಾಂತ ಡಿವೈಎಸ್ಪಿ ಬಿ.ಎಸ್. ಬಸವರಾಜ್, ಹರಿಹರ ವೃತ್ತ ನಿರೀಕ್ಷಕ ಸುರೇಶ್ ಸಗರಿ, ಪಿಎಸ್‌ಐ ಮಂಜುನಾಥ ಕುಪ್ಪೇಲೂರು ನೇತೃತ್ವದಲ್ಲಿನ ತಂಡ 23 ವರ್ಷಗಳ ವರೆಗೆ ತಲೆಮರೆಸಿಕೊಂಡಿದ್ದವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top