ದಾವಣಗೆರೆ: ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 1.10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಯಿಂದ 1.10 ಲಕ್ಷ ಮೌಲ್ಯದ 15 ಗ್ರಾಂ ಚಿನ್ನ ಹಾಗೂ 100 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜು. 19 ರಂದು ಬೆಳಗ್ಗೆ 9.45 ಗಂಟೆಗೆ ಮನೆ ಬೀಗ ಹಾಗೂ ಇಂಟರ್ ಲಾಕ್ ಮಾಡಿಕೊಂಡು ಹೋಗಿದ್ದಾಗ ಮನೆ ಕಳ್ಳತನವಾಗಿದೆ ಎಂದು ಹರಿಹರದ ಗಾಂಧಿನಗರ ನಿವಾಸಿ ಶೇಖ್ ಫಹಾನ್ ಮಸೂದ್ ದೂರು ನೀಡಿದ್ದರು. ಈ ಬಗ್ಗೆ ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿನ ಆರೋಪಿತರ ಹಾಗೂ ಸ್ವತ್ತಿನ ಪತ್ತೆಗಾಗಿ ಡಿವೈಎಸ್ಪಿ ಬಸವರಾಜ್ ಬಿ ಎಸ್ ಮಾರ್ಗದರ್ಶನದಲ್ಲಿ ಹರಿಹರ ನಗರ ಠಾಣೆ ಪಿಐ ದೇವಾನಂದ ರವರ ನೇತೃತ್ವದಲ್ಲಿ ಪಿ.ಎಸ್.ಐ ಶ ಜಿ.ಎಸ್.ವಿಜಯ್, ಶ್ರೀಪತಿ ಗಿನ್ನಿ , ಅಪರಾಧ ವಿಭಾಗ ಸಿಬ್ಬಂದಿಗಳಾದ ನಾಗರಾಜ ಸುಣಗಾರ, ಸಿದ್ದೇಶ.ಹೆಚ್, ರವಿ.ಆರ್, ರುದ್ರಸ್ವಾಮಿ.ಕೆ.ಸಿ, ಹನುಮಂತಪ್ಪ ಗೋಪನಾಳ, ಹೇಮಾನಾಯ್ಕ್, ಸತೀಶ.ಟಿ.ವಿ, ಚಮನ್ ಸಾಬ್, ರವಿ.ಬಿ.ಬಿ, ದೇವರಾಜ್ ಸೂರ್ವೆ, ಚಾಲಕ ರಂಗನಾಥ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಪಿಐ ಇಸ್ಮಾಯಿಲ್, ಪಿ.ಎಸ್.ಐ ಮಂಜುನಾಥ ಕಲ್ಲೆದೇವರು, ಸಿಬ್ಬಂದಿ ಅಖ್ತರ್.ಎಸ್.ಎಂ ನಾಗರಾಜ ಕುಂಬಾರ್, ವಿರೇಶ.ವಿ ಹಾಗೂ ರಾಘವೇಂದ್ರ, ಶಾಂತರಾಜ್ ಒಳಗೊಂಡ ತಂಡ ರಚಿಸಲಾಗಿತ್ತು‌ ಈ ತಂಡ ಖಚಿತ ಮಾಹಿತಿ ಮೇರೆಗೆ ಹರಿಹರ ನಗರದ ದೇವಸ್ಥಾನದ ರಸ್ತೆಯಲ್ಲಿ ಆರೋಪಿ ಮಕ್ದುಮ್ @ ಕುಟ್ಟಿ (55) ಈತನನ್ನು ಘಟನೆ ನಡೆದು ಒಂದು ವಾರದಲ್ಲಿಯೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತನಿಂದ ಕಳ್ಳತನ ಮಾಡಿದ್ದ ಅಂದಾಜು 1.10 ಲಕ್ಷ ಮೌಲ್ಯದ 15 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 100 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತನ ವಿರುದ್ಧ ಚಿತ್ರದುರ್ಗ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಮೇಲ್ಕಂಡ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಸಿಬ್ಬಂದಿಯವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *