ದಾವಣಗೆರೆ: ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪತ್ನಿ ಕೊಲೆ ಮಾಡಿದ ಪತಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಡೆದಿದೆ.
ಜಗಳೂರರು ತಾಲ್ಲೂಕಿನ ಸಂತೆ ಮುದ್ದಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಜಿ. ನಾಗಮ್ಮ(50) ತನ್ನ ಪತಿಯಿಂದಲೇ ಕೊಲೆಯಾಗಿರುವ ಘಟನೆ ನಡೆದಿದೆ.ತಾಲ್ಲೂಕಿನ ಗೌರಿಪುರ ಗ್ರಾಮದಲ್ಲಿ ಪತಿ ಸತ್ಯಪ್ಪ ತನ್ನ ಪತ್ನಿ ಶಿಕ್ಷಕಿ ಜಿ.ನಾಗಮ್ಮ ವಾಸವಿದ್ದರು. ಪತ್ನಿ ಅಕ್ರಮ ಸಂಬಂಧ ಹೊಂದಿರುತ್ತಾಳೆಂಬ ಅನುಮಾನದಿಂದ
ಜಾವ ಕೊಲೆ ಮಾಡಿ ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.
ವಿಷ ಸೇವಿಸಿದ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಲಶಿಕ್ಷಕಿ ನಾಗಮ್ಮ ಮತ್ತು ಸತ್ಯಪ್ಪ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಪತಿಯೇ ಪತ್ನಿಯನ್ನು ಕೊಲೆಗೈದಿದ್ದಾನೆ ಎಂಬ ಪೊಲೀಸ್ ಮೂಲದಿಂದ ತಿಳಿದುಬಂದಿದೆ.
ಸ್ಥಳಕ್ಕೆ ಎಎಸ್ಪಿ ಮಂಜುನಾಥ, ಡಿವೈಎಸ್ ಪಿ
ಬಸವರಾಜ್, ಪೊಲೀಸ್ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕೊಲೆಗೀಡಾದ ಶಿಕ್ಷಕಿ ನಾಗಮ್ಮನ ಪತಿಯೇ ಡೆತ್ ನೋಟ್ ಬರೆದು ವಿಷ ಸೇವಿಸಿರುವ ಮಾಹಿತಿ ತಿಳಿದು ಬಂದಿದೆ.