Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 80 ಸಾವಿರ ಮೌಲ್ಯದ ಎರಡು ಬೈಕ್ ವಶ

ದಾವಣಗೆರೆ

ದಾವಣಗೆರೆ: ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 80 ಸಾವಿರ ಮೌಲ್ಯದ ಎರಡು ಬೈಕ್ ವಶ

ದಾವಣಗೆರೆ: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 80 ಸಾವಿರ ಮೌಲ್ಯದ 2 ಬೈಕ್‌ ವಶಪಡಿಸಿಕೊಂಡಿದ್ದಾರೆ.

ನಗರದ ನಿಟುವಳ್ಳಿ ಮೌನೇಶ್ವರ ಬಡಾವಣೆ ನಿವಾಸಿ, ಆರನೇಕಲ್ಲು ಮೂಲದ ಎಸ್. ಶಂಕರಪ್ಪ(35) ಬಂಧಿತ ಆರೋಪಿ. ಕಳೆದ
ಸೆ.1ರಂದು ಸಂಜೆ ಹದಡಿ ರಸ್ತೆಯ ಎಸ್ಕೆಪ್ ಬಾರ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿವೈಎಸ್ಪಿ ಮಲ್ಲೇಶ್ದೊಡ್ಡಮನಿ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕಿ ಪ್ರಭಾವತಿ ಸಿ.ಸೇತಸನದಿ,ಪಿಎಸೈ ಜಿ.ಎನ್.ವಿಶ್ವನಾಥ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು ಆರೋಪಿಯನ್ನು ಪತ್ತೆ ಹಚ್ಚಿದೆ. ಆರೋಪಿಯ ಬಂಧನದಿಂದ ವಿದ್ಯಾನಗರ ಬಡಾವಣೆಯ 2 ಪ್ರಕರಣಗಳು ಪತ್ತೆಯಾಗಿವೆ.‌ ಈ ಆರೋಪಿಯು ಈ ಹಿಂದೆ ರೈಲ್ವೇ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದನು. ಪತ್ತೆ ಕಾರ್ಯ ಕೈಗೊಂಡ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ ಎಂ. ಸಂತೋಷ, ಜಿ.ಮಂಜುನಾಥ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top