Advertisement

ದಾವಣಗೆರೆ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರ ಬಂಧನ; 1.50 ಲಕ್ಷ ಮೌಲ್ಯದ 4 ಬೈಕ್ ವಶ

ದಾವಣಗೆರೆ: ವಿವಿಧ ಕಡೆ ಕಳ್ಳತನವಾಗಿದ್ದ 1.50 ಲಕ್ಷ ಮೌಲ್ಯದ 04 ಬೈಕ್ ಗಳನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನು ಬಂಧನ ಮಾಡಲಾಗಿದೆ.

ದಿನಾಂಕ 07.09.2024 ರಂದು ರಮೇಶ್.ಜೆ.ವಥನ್ ಎಂಬುವವರು ತಮ್ಮ ಹೊಂಡಾ ಶೈನ್ ಬೈಕನ್ನು ಕೆ.ಬಿ. ಬಡಾವಣೆಯಲ್ಲಿರುವ ತಮ್ಮ ಮನೆ ಮುಂಬಾಗ ನಿಲ್ಲಿಸಿದ್ದರು. ಯಾರೋ ಕಳ್ಳರು ದಿನಾಂಕ: 26.08.2024 ರಂದು ಕಳ್ಳತನ ಮಾಡಿಕೊಂಡು ಹೋಗಿದ್ದು, ಪತ್ತೆ ಮಾಡಿಕೊಡಿ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಸದರಿ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ.ಸಂತೋಷ್ , ಜಿ. ಮಂಜುನಾಥ್ ಹಾಗೂ ನಗರ ಡಿವೈಎಸ್ಪಿ ಮಲ್ಲೆಶ್ ದೊಡ್ಮನಿ ರ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್. ಹೆಚ್.ಎಸ್. ರವರ ನೇತೃತ್ವದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಸಾಗರ್ ಅತ್ತರವಾಲ ಮತಗತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದೆ‌. ಈ ತಂಡ ಭೂಮಿಕಾನಗರ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಇಬ್ಬರು ಕಾನೂನು ಸಂಘರ್ಷಕ್ಕೋಳಗಾದ ಬಾಲಕರನ್ನು ವಶಕ್ಕೆ ಪಡೆದುಕೊಂಡು ಸದರಿಯವರನ್ನು ಕೂಲಂಕುಷವಾಗಿ ವಿಚಾರ ಮಾಡಿದಾಗ

  • 1) ಕೆ.ಟಿಜೆ ನಗರ ಪೊಲೀಸ್ ಠಾಣೆಯ 02 ಬೈಕ್ ಕಳ್ಳತನ ಪ್ರಕರಣ
  • 2) ಭರಮಸಾಗರ ಪೊಲೀಸ್ ಠಾಣೆಯ 01 ಬೈಕ್ ಕಳ್ಳತನ ಪ್ರಕರಣ
  • 3) ಚಿಕ್ಕಜಾಜೂರು ರೈಲ್ವೆ ಸ್ಟೇಷನ್ ಬಳಿ ಕಳತನ ಮಾಡಿದ 01 ಬೈಕ್

ಮೇಲ್ಕಂಡ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ ಒಟ್ಟು 1.50.000/-ರೂ ಬೆಲೆಯ 04 ಬೈಕುಗಳನ್ನು ವಶ ಪಡಿಸಿಕೊಂಡಿರುತ್ತಾರೆ.
ಆರೋಪಿತರ ಪತ್ತೆ ಕಾರ್ಯದಲ್ಲಿ ಹಾಗು ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.

 

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Recent Posts