ದಾವಣಗೆರೆ: ಕನೂನು ಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧನ ಮಾಡಿದ್ದು, ಆರೋಪಿಗಳಿಂದ 1 ಲಕ್ಷ ಮೌಲ್ಯದ ಒಂದು ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ ನಗರದ ಬಾಡಕ್ರಾಸ್ ನಿಂದ ಆಂಜನೇಯ ಕಾಟನ್ ಮೀಲ್ ಕಡೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಯಾರೋ ಇಬ್ಬರು ಅಸಾಮಿಗಳು ಅಕ್ರಮವಾಗಿ ಗಾಂಜಾ ಇಟ್ಟುಕೊಂಡು ದಾರಿಯಲ್ಲಿ ಹೋಗುವ ಬರುವ ಸಾರ್ವಜನಿಕರಿಗೆ ಮಾರಾಟ ಮಾಡುತ್ತೀರುತ್ತಾರೆಂದು ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದ ಮೇರೆಗೆ ಎಎಸ್ಪಿಗಳಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ಹಾಗೂ ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಪಿಎಸ್ಐ ರೂಪ ತೆಂಬದ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಆಶೋಕ್, ಲೋಹಿತ್, ಮಲ್ಲಿಕಾರ್ಜುನ ಹಾದಿಮನಿ, ಬುಡೇನ್ ವಲಿ ತಂಡ ದಾಳಿ ಮಾಡಿದೆ.
ಕಾನೂನು ಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ 1) ವಿನಯ್ ಕುಲಕರ್ಣಿ (35) ತೋಳಹುಣಸಿ, 2) ವಿಶ್ವನಾಥ (44) ವಿನೋಬನಗರ ದಾವಣಗೆರೆ. ಇವರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ಅಂದಾಜು1,00,000/-ರೂ. ಮೌಲ್ಯದ 01 ಕೆಜಿ ಗಾಂಜಾವನ್ನು ಪಂಚರ ಸಮಕ್ಷಮ ಅಮಾನತ್ತುಪಡಿಸಿಕೊಂಡಿದ್ದು , ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.



