ದಾವಣಗೆರೆ: ಕಳೆದ ಮೂರು ತಿಂಗಳಿನಿಂದ ಸಂಬಳ ಬಂದಿಲ್ಲವೆಂದು ಮನನೊಂದು ಅಂಗನವಾಡಿ ಸಹಾಯಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕೆಟಿಜೆ ನಗರದ ಡಾಂಗೇ ಪಾರ್ಕ್ ಆವರಣದ ಅಂಗನವಾಡಿ ಕೇಂದ್ರ ಸಹಾಯಕಿ ಭಾರತಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಪತಿ ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದು, ಅಂಗನವಾಡಿ ನೌಕರಿ ಮಾಡಿ ಬರುವ ವೇತನದಲ್ಲಿ ಭಾರತಿ ಜೀವನ ನಡೆಸುತ್ತಿದ್ದರು.
ಕಳೆದ 3 ತಿಂಗಳಿನಿಂದ ವೇತನ ಬಾರದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ದಿಕ್ಕೇ ತೋಚದಂತಾಗ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನೆರೆಹೊರೆಯವರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.



