Connect with us

Dvgsuddi Kannada | online news portal | Kannada news online

ದಾವಣಗೆರೆ: ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; 1.35 ಲಕ್ಷ ನಗದು ವಶ

ದಾವಣಗೆರೆ

ದಾವಣಗೆರೆ: ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; 1.35 ಲಕ್ಷ ನಗದು ವಶ

ದಾವಣಗೆರೆ: ಜಿಲ್ಲೆಯ ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಶಾಂತ್ ನಗರದ ಶೇರಾಪುರ/ತೋಯಬಾ ಶಾಲೆ ಕಡೆ ಹೋಗುವ ರಸ್ತೆ ಪಕ್ಕದಲ್ಲಿರುವ ಖಾಲಿ ಜಗದಲ್ಲಿ ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. 1.35 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.

ಎಎಸ್ಪಿ ವಿಜಯಕುಮಾರ ಎಂ ಸಂತೋಷ್ ಮತ್ತು ಮಂಜುನಾಥ ಜಿ ರವರ ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಹರಿಹರ ನಗರ ಪೊಲೀಸ್ ನಿರೀಕ್ಷಕ ದಯಾನಂದ ಬಿ ನೇತೃತ್ವದಲ್ಲಿ ಪಿಎಸ್ಐ ಶ್ರೀಪತಿ ಗಿನ್ನಿ ಮತ್ತು ಸಿಬ್ಬಂದಿಗಳಾದ ನಾಗರಾಜ್, ರವಿ, ದೇವರಾಜ್ ಸರ್ವೇ, ನಾಗರಾಜ್, ರಾಜಾಸಾಬ್ ಪಿಂಜಾರ್, ಸಿದ್ದರಾಜು ರವಿನಾಯ್ಕ್, ರುದ್ರಸ್ವಾಮಿ ಒಳಗೊಂಡ ತಂಡವು ದಾಳಿ ಮಾಡಿದ್ದು, ಜೂಜಾಟದಲ್ಲಿ ತೊಡಗಿದ್ದ 14 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ 1,35,000/- ರೂ ನಗದು ಹಣವನ್ನು ವಶಪಡಿಸಿಕೊಂಡಿದ್ದು ಈ ಸಂಬಂಧ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top