ದಾವಣಗೆರೆ: ನಾಪತ್ತೆಯಾಗಿದ್ದ ಕಡ್ಲೇಬಾಳು ಗ್ರಾಮದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರ ರೂಪದಲ್ಲಿ ಪತ್ತೆಯಾಗಿದ್ದಾನೆ. ಪೊಲೀಸರು ಶವದ ಗುರುತು ಪತ್ತೆಹಚ್ಚಿದ್ದೆ ರೋಚಕವಾಗಿದೆ.
ತಾಲೂಕಿನ ಕಡ್ಲೇಬಾಳು ಗ ಗ್ರಾಮದ ತಿಪ್ಪೇಶ್ (42) ಮೃತಪಟ್ಟ ವ್ಯಕ್ತಿ. ತಿಪ್ಪೇಶ್ ಕಳೆದ 15 ದಿನದ ಹಿಂದೆ ನಾಪತ್ತೆಯಾಗಿದ್ದ. ಇದೇ ವ್ಯಕ್ತಿ ಈಗ ಅಣಜಿ ಕೆರೆ ಬಳಿ ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಕುಟುಂಬಸ್ಥರು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ತಿಪ್ಪೇಶ್ ತೆಗೆದುಕೊಂಡು ಹೋಗಿದ್ದ ಬೈಕ್ ಅಣಜಿ ಕೆರೆ ಏರಿಯ ಬದಿ ಪೊದೆಗಳ ಮಧ್ಯೆ ಪತ್ತೆಯಾಗಿದೆ. ಬೈಕ್ ನಂಬರ್ ಪರಿಶೀಲಿಸಿದಾಗ ಅದು ಕಡ್ಲೇಬಾಳು ವಿಳಾಸ ತೋರಿಸಿದೆ. ಗ್ರಾಮಸ್ಥರಿಗೆ ವಿಚಾರಿಸಿದಾಗ, ಕಡ್ಲೆಬಾಳು ಗ್ರಾಮದ ನಾಪತ್ತೆಯಾಗಿದ್ದ ತಿಪ್ಪೇಶನ ವಿಚಾರ ಗೊತ್ತಾಗಿದೆ. ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡ ಶವವನ್ನು ಗುರುತಿಸಿದ್ದಾರೆ. ಕುರಿಗಾಹಿಗಳು ಅಸ್ಥಿಪಂಜರ ನೋಡಿದ ನಂತರವೇ ತಿಪ್ಪೇಶ ಮೃತಪಟ್ಟಿರುವುದು ತಿಳಿದು ಬಂದಿದೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬುದು ತನಿಖೆ ನಂತರ ಗೊತ್ತಾಗಲಿದೆ.
ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಮಂಜುನಾಥ್, ವಿಜಯ್ ಕುಮಾರ್ ಎಂ. ಸಂತೋಷ್, ದಾವಣಗೆರೆ ಗ್ರಾಮಾಂತರ ಉಪಾಧೀಕ್ಷಕ ಬಿ.ಎಸ್. ಬಸವರಾಜ್, ಗ್ರಾಮಾಂತರ ವೃತ್ತ ನಿರೀಕ್ಷಕ ಕಿರಣಕುಮಾರ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.