ದಾವಣಗೆರೆ: ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಆರೋಪಿಯಿಂದ 28 ಗ್ರಾಂ ತೂಕದ 2,10,000 ರೂ. ಬೆಲೆ ಬಾಳುವ ಬಂಗಾರದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಅ.29ರಂದು ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಹರು ನಗರ ಕ್ಯಾಂಪ್ನ ವಾಸಿ ನಿವಾಸಿ ಲಕ್ಷ್ಮಿ (70) ಎಂಬುವವರ ಸರ ಕಳ್ಳತನವಾಗಿತ್ತು. ರಾತ್ರಿ ಮನೆ ಮುಂದೆ ವಾಕ್ ಮಾಡುವಾಗ ಯಾರೋ ಕಳ್ಳರು ಕೊರಳಿನಲ್ಲಿದ್ದ 22 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರರಾದ ವಿಜಯಕುಮಾರ್ ಎಂ ಸಂತೋಷ್ ಮತ್ತು ಮಂಜುನಾಥ ಹಾಗೂ ಡಿವೈಎಸ್ಪಿ ಬಸವರಾಜ್ ಬಿ.ಎಸ್ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪಿ.ಎಸ್.ಐ ಪ್ರಭು ಡಿ ಕೆಳಗಿನಮನಿ ನೇತೃತ್ವದಲ್ಲಿ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿತ್ತು.
ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ತನಿಖೆ ಕೈಗೊಂಡು ದಿನಾಂಕ: 04.11.2024 ರಂದು ಹರಿಹರ ತಾಲ್ಲೂಕಿನ ಗುಳೇದಹಳ್ಳಿ ಗ್ರಾಮ ಆರೋಪಿ ಹನುಮಂತ ಬಂಧನ ಮಾಡಿ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಮೇಲ್ಕಂಡ ಪ್ರಕರಣದ ಜೊತೆಗೆ 2023 ನೇ ಸಾಲಿನ ಮಲೇಬೆನ್ನೂರು ಠಾಣೆಯ ಮತ್ತೊಂದು ಪ್ರಕರಣದಲ್ಲಿಯೂ ಸಹ ಭಾಗಿಯಾಗಿರುವುದು ಪತ್ತೆಯಾಗಿದೆ.
ಆರೋಪಿತನಿಂದ ಒಟ್ಟು 28 ಗ್ರಾಂ ತೂಕದ ಸುಮಾರು ರೂ 2,10,000/- ಬೆಲೆ ಬಾಳುವ ಬಂಗಾರದ ಸರಗಳನ್ನು ಅಮಾನತ್ತು ಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



