ದಾವಣಗೆರೆ: 4.88 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆ; 24 ಗಂಟೆಯೊಳಗೆ ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪ್ರತಿ ದಿನ ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯೊಬ್ಬರು 4.88 ಲಕ್ಷ ಬೆಲೆಯ ಚಿನ್ನಾಭರಣ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಯನ್ನು‌ ಪೊಲೀಸರು ಬಂಧನ ಮಾಡಿದ್ದಾರೆ.

  • ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯಿಂದ ಕಳ್ಳತನ
  • ಒಟ್ಟು 4,88,000/- ರೂ ಮೌಲ್ಯದ ಚಿನ್ನಾಭರಣ ವಶ
  • ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿ ಬಂಧನ
  • ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ದಾವಣಗೆರೆಯ ಜಯನಗರ ‘ಎ’ ಬ್ಲಾಕ್ ನ‌ ಉಮಾ ಮಹೇಂದ್ರಕರ್ ಎಂಬುವವರು, ತಮ್ಮ ಮನೆಯ ರೂಮ್ ನ ಡ್ರಾನಲ್ಲಿಟ್ಟಿದ್ದ ಸುಮಾರು ಒಟ್ಟು 4,88,000/- ರೂ ಬೆಲೆಯ ಸುಮಾರು100 ಗ್ರಾಂ ಬಂಗಾರದ ಆಭರಣಗಳನ್ನು ನಮ್ಮ ಮನೆಯಲ್ಲಿ ಕೆಲಸಕ್ಕೆ ಬರುತ್ತಿದ್ದ ಹೆಚ್.ಸಾಕಮ್ಮ ಇವರು ಕಳ್ಳತನ ಮಾಡಿಕೊಂಡು ಹೋಗಿರುವ ಅನುಮಾನವಿದೆ ಎಂದು ದೂರು ನೀಡಿದ್ದರು.‌ ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈವಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ಎಎಸ್ಪಿಗಳಾದ ವಿಜಯಕುಮಾರ್ ಎಂ ಸಂತೋಷ್ , ಮಂಜುನಾಥ ಜಿ ಹಾಗೂ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪಿ.ಐ. ಸುನೀಲ್ ಕುಮಾರ್.ಹೆಚ್.ಎಸ್. ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ತಂಡ ರಚುಸಲಾಗಿತಗತು. ಈ ತಂಡ ನ.6ರಂದು ಪ್ರಕರಣದ ಆರೋಪಿ ಹೆಚ್. ಸಾಕಮ್ಮ (35 ) ಮನೆ ಕೆಲಸ, ವಾಸ: ಶ್ರೀರಾಮನಗರ ಇವರನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರ ಮಾಡಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಏನೆಲ್ಲಾ ವಶಕ್ಕೆ ಪಡೆಯಲಾಯಿತು; ಒಟ್ಟು 4,88,000/-ರೂ ಬೆಲೆಯ 1) ಸುಮಾರು 30 ಗ್ರಾಂ. ತೂಕದ ಹಸಿರು ಜೇಡ ಹರಳಿನ ಬಂಗಾರದ ನಕ್ಲೀಸ್ 2) ಸುಮಾರು 4.5 ಗ್ರಾಂ. ತೂಕದ ಒಂದು ಜೊತೆ ಓಲೆ 3) ಸುಮಾರು 60 ಗ್ರಾಂ. ತೂಕದ ಎರಡು ಎಳೆಯ ಬಂಗಾರದ ಸರ 4) 15 ಗ್ರಾಂ. ತೂಕದ ಬಂಗಾರದ ಗುಂಡಿನ ಸರವನ್ನು ವಶ ಪಡಿಸಿಕೊಂಡಿರುತ್ತಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *