ದಾವಣಗೆರೆ: ಮನೆಯ ಪಕ್ಕದಲ್ಲಿ ಗಾಂಜಾ ಬೆಳೆದ ಆರೋಪಿಗೆ 4 ತಿಂಗಳು ಜೈಲು, 10 ಸಾವಿರ ದಂಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಜಗರೇಕಟ್ಟೆ ಗ್ರಾಮದ ಶಿರಮನಹಳ್ಳಿ ಕೆಂಚಪ್ಪ ಗಾಂಜಾ ಬೆಳೆದ ವ್ಯಕ್ತಿ. ಕೆಂಚಪ್ಪ ಗ್ರಾಮದ ತಮ್ಮ‌ಮನೆಯ ಪಕ್ಕದ ಖಾಲಿ ಜಾಗದಲ್ಲಿ ಕಾನೂನು ಬಾಹಿರವಾಗಿ 6 ಅಡಿ ಎತ್ತರದ ಗಾಂಜಾ ಗಿಡವನ್ನು ಬೆಳೆಸಿದ್ದು, ಖಚಿತ ಮಾಹಿತಿ ಮೇರೆ ಗ್ರಾಮಂತರ ಸಿಪಿಐ ಮಂಜುನಾಥ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.

ತನಿಖಾಧಿಕಾರಿ ಹದಡಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸಾದ್ ಪಿ ಅವರು ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು
ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಅವರು ಶಿರಮನಹಳ್ಳಿ ಕೆಂಚಪ್ಪ ಅವರ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *