Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾಪರ್ ಏಜ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮಾಲೀಕ ಆತ್ಮಹತ್ಯೆ

davangere crime 2

ದಾವಣಗೆರೆ

ದಾವಣಗೆರೆ: ಕಾಪರ್ ಏಜ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮಾಲೀಕ ಆತ್ಮಹತ್ಯೆ

ದಾವಣಗೆರೆ: ಕಾಪರ್ ಏಜ್ ಗ್ರೂಪ್‌ ಆಫ್ ಇನ್‌ಸ್ಟಿಟ್ಯೂಟ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಮಾಲೀಕ ಶರತ್ ಜಿ.ಎನ್. (35) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ಎಸ್.ಎಸ್. ಬಡಾವಣೆಯ ನಿವಾಸಿಯಾದ ಶರತ್ ಅವಿವಾಹಿತರಾಗಿದ್ದರು. ಶರತ್, ತಂದೆ – ತಾಯಿ ಕಾರ್ಯಕ್ರಮಕ್ಕೆಂದು ಹೊರಗಡೆ ಹೋಗಿದ್ದಾಗ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದಾವಣಗೆರೆಯ ಬಡಾವಣೆಯ ಎಂಸಿಸಿ ಬಿ ಬ್ಲಾಕ್ ನ ಈಜುಕೊಳ ಸಮೀಪ ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಂಸ್ಥೆ ಕಟ್ಟಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಪ್ರಸಿದ್ಧಿಗಳಿಸಿದ್ದರು. ದಾವಣಗೆರೆಯಲ್ಲದೆ, ವಿವಿಧ ಜಿಲ್ಲೆಗಳಲ್ಲಿ  ಸಂಸ್ಥೆಯ ಶಾಖೆಗಳಿವೆ.

ಐಎಎಸ್‌, ಐಪಿಎಸ್‌ ಯಲ್ಲಿ ಶರತ್ ಪಾಸ್ ಆಗದ ಕೊರಗು ಇತ್ತು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top