ದಾವಣಗೆರೆ: ಕಾನೂನು ಬಾಹಿರವಾಗಿ ಗಾಂಜಾ ಮಾರಾಟ ಮಾಡುವವರ ಮೇಲೆ ಹಾಗೂ ಸೇವನೆ ಮಾಡುವವರ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲು ಎಸ್ಪಿ ಸೂಚಿಸಿದ್ದು, ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ನಗರದ ಹದಡಿ ರಸ್ತೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಯಾರೋ ಒಬ್ಬ ಆಸಾಮಿಯು ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಕಿರಣ್ ಎಸ್. (22), ಫೈಬರ್ ಡೋರ್ ಮತ್ತು ಪ್ಲಂಬಿಗ್ ಕೆಲಸ, ವಾಸ: ಭದ್ರಾವತಿ ಟೌನ್, ಶಿವಮೊಗ್ಗ ಜಿಲ್ಲೆ, ಈತನನ್ನು ವಶಕ್ಕೆ ಪಡೆದು ಆರೋಪಿಯಿಂದ ಒಂದು ಲಕ್ಷ ಮೌಲ್ಯದ 01 ಕೆಜಿ ಗಾಂಜಾ, ಮತ್ತು ಒಂದು ಬೈಕ್ ನ್ನು ವಶಕ್ಕೆ ಪಡೆದುಕೊಂಡಿರುತ್ತದೆ. ಈ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿರುತ್ತದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ , ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್ ಹಾಗೂ ಸಿಬ್ಬಂದಿಗಳಾದ ಅಂಜಿನಪ್ಪ, ಲೋಹಿತ್, ಅಶೋಕ್, ನಿಜಲಿಂಗಪ್ಪ , ಯೋಗೀಶ್ ನಾಯ್ಕ್ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ ಮತ್ತು ಮಂಜುನಾಥ ಜಿ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.



