Connect with us

Dvgsuddi Kannada | online news portal | Kannada news online

ದಾವಣಗೆರೆ; ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಕಳವು ಪ್ರಕರಣ; ಮಗು, ಆರೋಪಿ ಬಗ್ಗೆ ಮಾಹಿತಿ ನೀಡಿದ್ರೆ 25 ಸಾವಿರ ಬಹುಮಾನ..!

ದಾವಣಗೆರೆ

ದಾವಣಗೆರೆ; ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಕಳವು ಪ್ರಕರಣ; ಮಗು, ಆರೋಪಿ ಬಗ್ಗೆ ಮಾಹಿತಿ ನೀಡಿದ್ರೆ 25 ಸಾವಿರ ಬಹುಮಾನ..!

ದಾವಣಗೆರೆ: ಇತ್ತೀಚೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಎರಡು ಗಂಟೆಯಲ್ಲಿಯೇ ಗಂಡು ಮಗುವೊಂದು ನಾಪತ್ತೆ ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿ ಮತ್ತು ಮಗುವಿನ ಬಗ್ಗೆ ಮಾಹಿತಿ ನೀಡಿದವರಿಗೆ 25 ಸಾವಿರ ನಗದು ಬಹುಮಾನ ನೀಡುವುದಾಗಿ ಜಿಲ್ಲಾ ಪೊಲೀಸ್ ಘೋಷಣೆ ಮಾಡಿದೆ.

ನಗರದ ಚಾಮರಾಜಪೇಟೆಯಲ್ಲಿರುವ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿಯಾದ ಉಮೇಸಲ್ಮಾ ಹಾಗೂ ಇಸ್ಮಾಯಿಲ್ ಜಬೀವುಲ್ಲಾ ದಂಪತಿಯ ಗಂಡು ಮಗು ನಾಪತ್ತೆಯಾಗಿತ್ತು. ಉಮೇಸಲ್ಮಾ ಮಾ.16ರಂದು ಸಂಜೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಜನಿಸಿದ ಎರಡು ಗಂಟೆಯಲ್ಲಿಯೇ ಮಗು ಕಾಣುತ್ತಿಲ್ಲ. ಈ ಪ್ರಕರಣದಲ್ಲಿ ಮಗು ಕಳ್ಳತನವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದೀಗ ಒಂದು ದಿನದ ಮಗು ಮತ್ತು ಆರೋಪಿಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ರೆ 25 ಸಾವಿರ ನೀಡುವುದಾಗಿ ಎಸ್.ಪಿ ರಿಷ್ಯಂತ್ ಘೋಷಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top