ದಾವಣಗೆರೆ: ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ; ಎಲ್ಲಿ ..? ಯಾವಾಗ..? ಏನು ಶಿಕ್ಷೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಕ್ರಮ ಪಡಿತರ ಅಕ್ಕಿ ದಾಸ್ತಾನು ಗೋಡಾನ್ ಮೇಲೆ ದಾಳಿಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣದ ಅಪರಾಧಿಗಳಿಗೆ 01 ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 60 ಸಾವಿರ ರೂ ದಂಡ ವಿಧಿಸಲಾಗಿದೆ

ದಿನಾಂಕ : 08/04/2017ರಂದು ಹಳೇಬಾತಿ ಗ್ರಾಮದ ಉಮಾಪತಯ್ಯ ಗೋಡಾನ್ ಹತ್ತಿರ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ 550 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ದಾಳಿ ಮಾಡಲು ಹೋಗಲಾಗಿತ್ತು. ಈ ವೇಳೆ ಎ1-ಉಮಾಪತಯ್ಯ, ಎ2-ಪ್ರಶಾಂತ್ , ಎ3-ಕಿರಣ್ ಹಾಗೂ ಇತರರು ಸೇರಿಕೊಂಡು ಅಧಿಕಾರಿಗಳ ಮೇಲೆ ಹಲ್ಲೆಗೆಯತ್ನಿಸಿದ್ದರು. ಸ್ಥಳದಲ್ಲಿದ್ದ 02 ಲಾರಿ ಮತ್ತು ಟ್ರ್ಯಾಕ್ಟ‌ರ್  ಟ್ಯಾಲಿಯನ್ನು ತಡೆಯಲು ಹೋದಾಗ ಕೆಎ-17, ಎ-5022 ನೇ ಲಾರಿ ಚಾಲಕನು ಅಧಿಕಾರಿಗಳ ಮೇಲೆ ಲಾರಿಯನ್ನು ಚಾಲಯಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದರು.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದಾಡಿ 500/- ರೂ ನೋಟಿನ ಕಟ್ಟನ್ನು ತೆಗೆದುಕೊಂಡು ಬಂದು ಅಧಿಕಾರಿಗಳಿಗೆ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದ ದೂರಿನ ಮೇರೆಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಕಿರಣ್‌ ಕುಮಾರ್ ತನಿಖೆ
ಕೈಗೊಂಡು ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.

ಈ ಸಂಬಂಧ ಘನ 02 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಆರ್.ಎನ್ ರವರು ಅಪರಾಧಿಗಳ ಎ1-ಉಮಾಪತಯ್ಯ ( 58) ಎ2-ಪ್ರಶಾಂತ್ (34) ಎ3-ಕಿರಣ್ ( 20 ) ಆರೋಪ ಸಾಬೀತಾಗಿದ್ದರಿಂದ ದಿನಾಂಕ:22-01-2025 ರಂದು ಅಪರಾಧಿಗಳಿಗೆ 01 ವರ್ಷ ಸಾದಾ ಕಾರಾಗೃಹ ಶಿಕ್ಷೆ, ತಲಾ 20,000/-ರೂ ದಂಡ ಒಟ್ಟು ದಂಡದ ಮೊತ್ತ 60,000/- ರೂ ದಂಡ ವಿಧಿಸಿ ತೀರ್ಪು ನೀಡಿರುತ್ತದೆ. ಈ ಪ್ರಕರಣದಲ್ಲಿ ದೂರುದಾಋ ಪರವಾಗಿ ಸರ್ಕಾರಿ ವಕೀಲ ಜಯ್ಯಪ್ಪ ಕೆ.ಜಿ ನ್ಯಾಯ ಮಂಡನೆ ಮಾಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *