ದಾವಣಗೆರೆ: ಸರ್ಕಾರಿ ಶಾಲೆ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ; ಕಾರಣ ಏನು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು, ಸರ್ಕಾರಿ ಶಾಲೆ ಶಿಕ್ಷಕಿ ಹೊನ್ನಾಳಿ ಬಳಿ ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು( ಜ.27) ನಡೆದಿದೆ.ಹಾವೇರಿ ಜಿಲ್ಲೆಯ ತುಮ್ಮಿನಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡವರು.

ಹೊನ್ನಾಳಿಯ ರಾಘವೇಂದ್ರ ಮಠದ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನದಿಯಲ್ಲಿ ಇದುವರೆಗೂ ಶವ ಪತ್ತೆಯಾಗಿಲ್ಲ. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪುಷ್ಪಲತಾ ಅವರ ಪತಿ ಸಹ ಚಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ.

ದಂಪತಿ ಹೊಸದಾಗಿ ಹೊನ್ನಾಳಿಯಲ್ಲಿ ಮನೆ ಕಟ್ಟಿಸಿದ್ದರು. ಇದಕ್ಕಾ ಫೈನಾನ್ಸ್ ನಲ್ಲಿ ಸಾಲ ಪಡೆದಿದ್ದರು. ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *