ದಾವಣಗೆರೆ: ಖಾರದಪುಡಿ ಎರಚಿ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಹಿಳೆ ಮುಖಕ್ಕೆ ಖಾರದಪುಡಿ ಎರಚಿ 2 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರ (Gold chain) ಕಿತ್ತುಕೊಂಡು ಪರಾರಿಯಾದ ಘಟನೆ ಹರಿಹರ ತಾಲ್ಲೂಕಿನ ಕೊಕ್ಕನೂರು ಗ್ರಾಮದಲ್ಲಿ ನಡೆದಿದೆ.

ಕೊಕ್ಕನೂರು ಗ್ರಾಮದ ಮಲ್ಲಮ್ಮ ಎಂಬುವವರ ಕೊರಳಲ್ಲಿದ್ದ 37 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳನೊಬ್ಬ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಮಲ್ಲಮ್ಮ ಬೆಳಿಗ್ಗೆ ಎಂದಿನಂತೆ ಮನೆ ಅಂಗಳ ಕಸಗುಡಿಸುತ್ತಿದ್ದರು. ಈ ವೇಳೆ ಮುಖಕ್ಕೆ ಬಟ್ಟೆ ಮುಚ್ಚಿಕೊಂಡು ಬಂದ ವ್ಯಕ್ತಿಯೊಬ್ಬ ಖಾರದಪುಡಿ ಎರಚಿ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾನೆ.

ಈ ವೇಳೆ ಮಹಿಳೆ ಜೋರಾಗಿ ಕೂಗಾಟ ಮಾಡಿದ್ದು, ಅಕ್ಕಪಕ್ಕದವರು ಸೇರಿ ಕಳ್ಳನನ್ನು ಹಿಡಿಯುವಷ್ಟರಲ್ಲಿ ಪರಾರಿಯಾಗಿದ್ದಾನೆ. 2 ಲಕ್ಷ ‌ಮೌಲ್ಯದ ಮಾಂಗಲ್ಯ ಕಳ್ಳತನವಾಗಿದೆ. ಮಾಡಲಾಗಿದೆ. ಸಿಪಿಐ ಸುರೇಶ್‌ ಸಗರಿ, ಪಿಎಸ್‌ಐ ಪ್ರಭು ಕೆಳಗಿನಮನಿ ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನ ದಳ ಪರಿಶೀಲನೆ ನಡೆಸಿದೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *