ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.40 ಲಕ್ಷ ಮೌಲ್ಯದ 163 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಕಡೆಯಿಂದ ಮಾಸಡಿ ಗ್ರಾಮದ ಮುಖಾಂತರ ಹೊನ್ನಾಳಿ ಟೌನ್ ಕಡೆಗೆ ಒಂದು ಲಾರಿಯಲ್ಲಿ ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ ಅಂತ ಖಚಿತ ಮಾಹಿತಿ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಹಾಗೂಸಂತೋಷ್ ಕೆ.ಎಂ. ಡಿವೈಎಸ್ಪಿ, ಚನ್ನಗಿರಿ ಉಪವಿಭಾಗ ಮಾರ್ಗದರ್ಶನದಲ್ಲಿ ದೇವರಾಜ್ ಸಿಪಿಐ, ಹೊನ್ನಾಳಿ ವೃತ್ತ ಮತ್ತು ಬಸವರಾಜ ಬಿರಾದರ ಪಿ.ಎಸ್.ಐ ಹೊನ್ನಾಳಿ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ಹಾಗೂ ಸುನೀತಾ ಕೆ ಪಿ ಆಹಾರ ಶಿರಸ್ತೇದಾರರು, ಮಂಜುನಾಥ ಹೆಚ್.ಸಿ ಆಹಾರ ನಿರೀಕ್ಷಕ ನೇತೃತ್ವದಲ್ಲಿ ದಾಳಿ ನಡೆದಿದೆ.
ಕುಂದೂರು ಗ್ರಾಮದ ಕಡೆಗೆ ಹೋಗುವ ಕ್ರಾಸ್ ಹತ್ತಿರ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಲಾಭ ಪಡೆಯುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ. 2.40 ಲಕ್ಷ ಮೌಲ್ಯದ 163 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಮತ್ತು ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಬಳಸಿದ ಲಾರಿಯನ್ನು ಅಮಾನತ್ತುಪಡಿಸಿಕೊಂಡಿದ್ದು. ಓರ್ವ ಆರೋಪಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ. ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



