Connect with us

Dvgsuddi Kannada | online news portal | Kannada news online

ದೇವರ ಉತ್ಸವ ವಿಚಾರ; ಎರಡು‌ ಗ್ರಾಮಸ್ಥರ ನಡುವೆ ಮಾರಮಾರಿ

images 19

ದಾವಣಗೆರೆ

ದೇವರ ಉತ್ಸವ ವಿಚಾರ; ಎರಡು‌ ಗ್ರಾಮಸ್ಥರ ನಡುವೆ ಮಾರಮಾರಿ

ದಾವಣಗೆರೆ: ದೇವರ ಉತ್ಸವ ವಿಚಾರದಲ್ಲಿ ಎರಡು ಗ್ರಾಮಗಳ ಜನರ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿ ಮತ್ತು ಮಾದನಭಾವಿ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ. ಬಸವನಹಳ್ಳಿ ಮತ್ತು ಮಾದನಬಾವಿ ಗ್ರಾಮದವರ ನಡುವೆ ಯುಗಾದಿ ಹಬ್ಬದ ನಂತರ ಪೂಜೆ ಕಾರ್ಯಕ್ರಮದ ವೇಳೆ ಗಲಾಟೆಯಾಗಿದೆ.

20 ವರ್ಷಗಳ ಹಿಂದೆ ಗಲಾಟೆ ನಡೆದು ಕೋರ್ಟ್ ಮೆಟ್ಟಿಲೇರಿದ್ದರು. 20 ನಿಮಿಷದೊಳಗೆ ಬಸವನಾಳ ಗ್ರಾಮದಿಂದ ಉತ್ಸವ ಹೊರಗೆ ಹೋಗಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು. ಎರಡು ಗಂಟೆ ಕಳೆದರೂ ಉತ್ಸವ ಗ್ರಾಮ ಬಿಟ್ಟು ಹೋಗದ ಹಿನ್ನೆಲೆಯಲ್ಲಿ ಜಗಳವಾಡಿದ್ದಾರೆ.

ಗೋವಿನಕೋವಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲೆಸೆತ ನಡೆದಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top