Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕ್ ವ್ಹಿಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕರ ಮೇಲೆ ಬಿತ್ತು ಕೇಸ್

ದಾವಣಗೆರೆ

ದಾವಣಗೆರೆ: ಬೈಕ್ ವ್ಹಿಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕರ ಮೇಲೆ ಬಿತ್ತು ಕೇಸ್

ದಾವಣಗೆರೆ: ಬೈಕ್ ವ್ಹಿಲಿಂಗ್ (bike wheeling) ಮಾಡಿ ಸಾಮಾಜಿಕ ಜಾಲತಾಣದಲ್ಲಿ(social Media) ಹರಿಬಿಟ್ಟ ಯುವಕನ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ದಾವಣಗೆರೆ: ಖಾಸಗಿ ಹೋಟೆಲ್ ನಲ್ಲಿ ಇಸ್ಫೀಟ್ ಜೂಜಾಟದ ಮೇಲೆ ದಾಳಿ; 26 ಜನ ಬಂಧನ- 24.86 ಲಕ್ಷ ನಗದು ವಶ

ಫೆ.11ರಂದು ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಗಿರಿ-ದಾವಣಗೆರೆ ರಸ್ತೆಯ ಶಾಂತಿಸಾಗರ ಬಳಿ ಇರುವ ಸಿದ್ದಪ್ಪ ದೇವಾಸ್ಥಾನದ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಒಬ್ಬ ಬೈಕ್ ಸವಾರನು ತನ್ನ ಬೈಕಿನ ಹಿಂಬದಿಯಲ್ಲಿ ಇನ್ನೊಬ್ಬನನ್ನು ಕೂರಿಸಿಕೊಂಡು ಹೆಲ್ಮೆಟ್ ಧರಿಸದೇ, ಅತೀ ವೇಗವಾಗಿ & ನಿರ್ಲಕ್ಷತನದಿಂದ ಚಾಲನೆ ಮಾಡುತ್ತಾ ಬೈಕ್ ನ ಮುಂದಿನ ಗಾಲಿಯನ್ನು ಹಾರಿಸಿಕೊಂಡು ಹಿಂಬದಿಯ ಒಂದೇ ಗಾಲಿಯಲ್ಲಿ ಚಾಲನೆ (ಬೈಕ್ ವ್ಹಿಲಿಂಗ್) ಮಾಡುತ್ತಾ ರಸ್ತೆಯಲ್ಲಿ ಸಂಚರಿಸಿದ್ದಾನೆ. ಇದರಿಂದ ಇತರೆ ವಾಹನ ಸವಾರರಿಗೆ & ಸಾರ್ವಜನಿಕರಿಗೆ ತೊಂದರೆ ಉಂಟಾಗುವ ರೀತಿಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ. ಈ ಪೋಟೋ ವಿಡಿಯೋವನ್ನು ಪರಿಶೀಲನೆ ಮಾಡಿ ಬೈಕ್ ಸವಾರ ಜಮೀರ್ @ ಪಾಪಾ, ಚನ್ನಗಿರಿ ಟೌನ್, ಎಂದು ತಿಳಿದು ಬಂದಿದ್ದು, ಸಂಚಾರ ನಿಯಮಗಳನ್ನು ಉಲ್ಲಂಘನೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಆಗುವಂತೆ ಬೈಕ್ ಸವಾರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ದಾವಣಗೆರೆ: ಬೈಕ್ ಸವಾರರಿಗೆ ಹೆಲ್ಮೆಟ್ ಜಾಗೃತಿ; ಉತ್ತಮ ಗುಣಮಟ್ಟದ ಹೆಲ್ಮೆಟ್ ತಂದು ಠಾಣೆಗೆ ತೋರಿಸುವರೆಗೂ ಬೈಕ್ ಲಾಕ್ ಎಚ್ಚರಿಕೆ..!!

ಜಿಲ್ಲಾ ಪೊಲೀಸ್ ವತಿಯಿಂದ ಯುವ ಜನತೆಗೆ ಸೂಚನೆ: ಜಿಲ್ಲೆಯಲ್ಲಿ ಕೆಲವು ಕಡೆ ಹುಚ್ಚು ಕ್ರೇಜ್ ಗಾಗಿ, ಸಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹಾಕಲು ಸಂಚಾರ ನಿಯಮಗಳ ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದೆರೆಯುಂಟಾಗುವ ರೀತಿಯಲ್ಲಿ ಹಾಗೂ ತಮ್ಮ ಜೀವಕ್ಕೆ ಹಾನಿಯಾಗುವಂತೆ ವಾಹನ ಚಾಲನೆ ಮಾಡುವಂತ ಯುವಕರು ಕಂಡುಬಂದಿದ್ದು, ಅತೀವೇಗವಾಗಿ, ಹೆಲ್ಮೇಟ್ ಧರಿಸದೇ, ಚಾಲನ ಪರವಾನಿಗೆ ಇಲ್ಲದೇ, ಸಂಚಾರ ನಿಯಮಗಳನ್ನು ಪಾಲನೆ ಮಾಡದೇ ಸಂಚರಿಸುವ ಬೈಕ್ ಸವಾರರಿಗೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವತಿಯಿಂದ ಎಚ್ಚರಿಕೆ ನೀಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top