ದಾವಣಗೆರೆ: ಇಸ್ಫೀಟ್ ಜೂಜಾಟ ಅಡ್ಡೆ ಮೇಲೆ ಕೆಟಿಜೆ ನಗರ ಪೊಲೀಸರು ದಾಳಿ ಮಾಡಿದ್ದು, 1,04,110 ರೂ ನಗದು ಹಾಗೂ 21 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ: ಶಿವರಾತ್ರಿ ಹಬ್ಬ; ಖ್ಯಾತ ಗಾಯಕಿ ಅರ್ಚನಾ ಉಡುಪ ಸಂಗೀತ ಕಾರ್ಯಕ್ರಮ
ಫೆ. 24ರಂದು ದಾವಣಗೆರೆ ನಗರದ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಲಾಯರ್ ರಸ್ತೆಯ ಕೊನೆಯಲ್ಲಿ ಮುತ್ತೂಟ್ ಗೋಲ್ಡ್ ಪಾಯಿಂಟ್ ನ ಮೇಲ್ಭಾಗದ ಮಹಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಜಿ ಮಂಜುನಾಥ್, ಡಿವೈಎಸ್ಪಿ ಶರಣಬಸವೇಶ್ವರ. ಬಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ ಹೆಚ್ ಎಸ್ . ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ಮಾಡಿದೆ.
ದಾವಣಗೆರೆ: 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ದಾಳಿ ವೇಳೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 21 ಜನರನ್ನು ವಶಕ್ಕೆ ಪಡೆದು ಆರೋಪಿಗಳಿಂದ ಇಸ್ಪೀಟ್ ಜೂಜಾಟ ಆಡಲು ತೊಡಗಿಸಿದ್ದ 1.04.110 ರೂ ನಗದು ಹಣವನ್ನು ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದು, ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪ ಮತ್ತು ಮನೆಯನ್ನು ಬಾಡಿಗೆ ನೀಡಿ ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟ ಮನೆಯ ಮಾಲೀಕರ ವಿರುದ್ದ ಕೆಟಿಜೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



