Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾನಗರ ಮನೆವೊಂದರ ಕಳ್ಳತನ ಆರೋಪಿ ಬಂಧನ; 3.15 ಲಕ್ಷ ಮೌಲ್ಯದ ಸ್ವತ್ತು ವಶ

images 2024 12 23T104546.026

ದಾವಣಗೆರೆ

ದಾವಣಗೆರೆ: ವಿದ್ಯಾನಗರ ಮನೆವೊಂದರ ಕಳ್ಳತನ ಆರೋಪಿ ಬಂಧನ; 3.15 ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ: ನಗರದ ಪ್ರತಿಷ್ಠಿತ‌ ಏರಿಯಾದಲ್ಲೊಂದಾದ ವಿದ್ಯಾನಗರ ಮನೆವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧನ ಕಳ್ಳತನ ಮಾಡಿದ್ದಾರೆ. ಆರೋಪಿಯಿಂದ 3.15 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ: ವೇಶ್ಯಾವಾಟಿಕೆ ಜಾಲ ಪತ್ತೆ; ಮೂವರು ಬಂಧನ-ಇಬ್ಬರು ಮಹಿಳೆಯರ ರಕ್ಷಣೆ

ದಿನಾಂಕ 28.02.2025 ರಂದು ವಿದ್ಯಾನಗರದ ಸುಮಿತ್ರ ಗಂಡ ಕಲ್ಲಪ್ಪ ವಿದ್ಯಾ ನಗರ ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ತಾನು ಪತಿ ಜೊತೆ ವಿದ್ಯಾ ನಗರ 3 ನೇ ಕ್ರಾಸ್ ರಸ್ತೆಯಲ್ಲಿ ವಾಸವಾಗಿದ್ದು, ದಿ:14.02.2025 ರಂದು ಬೆಳಿಗ್ಗೆ 6.00 ಗಂಟೆಗೆ ನಮ್ಮ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದೇವು. ನಂತರ ದಿನ ಬೆಳಿಗ್ಗೆ 11.00 ಗಂಟೆಗೆ ಬಂದು ನೋಡಿದಾಗ ಯಾರೋ ಕಳ್ಳರು ನಮ್ಮ ಮನೆಯ ಕಿಟಕಿ ಸರಳುಗಳನ್ನು ಯಾವುದೋ ಆಯುಧದಿಂದ ಕಟ್ ಮಾಡಿ ಮನೆಯಲ್ಲಿ ಇಟ್ಟಿದ್ದ 170 ಗ್ರಾಂ ತೂಕದ ಬಂಗಾರದ ಆಭರಣ ಹಾಗು 50 ಸಾವಿರ ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಪತ್ತೆ ಮಾಡಿಕೊಡಿ ಅಂತ ಪ್ರಕರಣ ದಾಖಲಿಸಿದ್ದರು.

ದಾವಣಗೆರೆ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿ ಮೂವರು ನೀರುಪಾಲು

ಈ ಪ್ರಕರಣದಲ್ಲಿ 2 ನೇ ಆರೋಪಿತನನ್ನು ದಿನಾಂಕ: 02-03-2025 ರಂದು ಈಗಾಗಲೇ ಹರಿಹರ ನಗರ ಪೊಲೀಸ್ ಠಾಣೆಯವರು ಪತ್ತೆಮಾಡಿ 123 ಗ್ರಾಂ ಆಭರಣಗಳನ್ನು ವಶಪಡಿಸಿಕೊಂಡಿದ್ದರು. ,ಪ್ರಕರಣದ‌‌ ಮೊದಲ ಆರೋಪಿ ಪತ್ತೆ ಮಾಡಲು ಎಸ್ಪಿ ಉಮಾ ಪ್ರಶಾಂತ್ , ಎಎಸ್ಪಿಗಳಾದ ವಿಜಯಕುಮಾರ.ಎಂ. ಸಂತೋಷ್, ಜಿ. ಮಂಜುನಾಥ ಹಾಗೂ ಡಿವೈಎಸ್ಪಿ ಶರಣ ಬಸವೇಶ್ವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕ ಶಿಲ್ಪಾ ವೈ.ಎಸ್, ಪಿ.ಎಸ್.ಐ ವಿಶ್ವನಾಥ ಜಿ ಎನ್ . ನಾಗರಾಜ ಹಾಗು ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಗಿತ್ತು.

ಈ ಪ್ರಕರಣದಲ್ಲಿ 01 ನೇ ಆರೋಪಿ ಪ್ರವೀಣ (29) ವಾಸ ;ರಾಣೆಬೆನ್ನೂರು. ಈತನನ್ನು ಬಂಧಿಸಿದ್ದು, ಆರೋಪಿಯಿಂದ ಕಳ್ಳತನ ಮಾಡಿದ್ದ 2,25,000/- ರೂ ಬೆಲೆಯ 37 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಹಾಗು 90,000/-ರೂ ಬೆಲೆಯ ಎರಡು ಬೈಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿತನ ಹಿನ್ನೇಲೆ: ತೀರ್ಥಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಸರಗಳ್ಳತನ ಪ್ರಕರಣದಲ್ಲಿ ಆರೋಪಿತನಾಗಿರುತ್ತಾನೆ. ಈ ಈಗ್ಗೆ ಆಗಸ್ಟ್ 2024 ರಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ನಂತರ ದಾವಣಗೆರೆ ನಗರದಲ್ಲಿ ಕಳ್ಳತನ ಮಾಡಿರುತ್ತಾನೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top