Connect with us

Dvgsuddi Kannada | online news portal | Kannada news online

ದಾವಣಗೆರೆ: 24 ಗಂಟೆಯೊಳಗೆ ಕೊಲೆ ಆರೋಪಿ ಪತ್ತೆ ಮಾಡಿದ ಶ್ವಾನದಳದ ತಾರಾ; ಆರೋಪಿ ಬಂಧನ

crime news 6

ದಾವಣಗೆರೆ

ದಾವಣಗೆರೆ: 24 ಗಂಟೆಯೊಳಗೆ ಕೊಲೆ ಆರೋಪಿ ಪತ್ತೆ ಮಾಡಿದ ಶ್ವಾನದಳದ ತಾರಾ; ಆರೋಪಿ ಬಂಧನ

ದಾವಣಗೆರೆ: ಒಂದು ಕಿಲೋಮೀಟರ್ ದೂರ ಕ್ರಮಿಸಿ 24 ಗಂಟೆಯೊಳಗೆ ಕೊಲೆ ಆರೋಪಿಯನ್ನು ಶ್ವಾನದಳದ ತಾರಾ ಸಹಾಯದೊಂದಿಗೆ ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದ ಜಯಪ್ಪ(29) ಬಂಧಿತ ಆರೋಪಿ. ಚಿತ್ರದುರ್ಗ ತಾಲೂಕಿನ ಭರಮಸಾಗರ ಸಮೀಪದ ಹೆಗಡೆಹಾಳ್ ಗ್ರಾಮದ ಶಿವಕುಮಾರ್ ಕೊಲೆಯಾದವರು.

ಕೊಲೆಯಾದ ಶಿವಕುಮಾರ್ ಮತ್ತು ಜಯಪ್ಪನ ಪತ್ನಿ ಪರಿಮಳ ನಡುವೆ ಅನೈತಿಕ ಸಂಬಂಧವಿತ್ತು.‌ ಏ.‌ 4 ರಂದು ಶಿವಕುಮಾರ್ ಪರಿಮಳಳನ್ನು ಭೇಟಿಯಾಗಲು ಹೊನ್ನೂರಿಗೆ ಬಂದಿದ್ದನು. ಈ ವೇಳೆ ಜಯಪ್ಪ ಮತ್ತು ಶಿವಕುಮಾರ್ ‌ನಡುವೆ ಮಾತಿನ ಚಕಮಕಿ ನಡೆದು, ಜಯಪ್ಪ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಶಿವಕುಮಾರ್ ಓಡಿ ಹೋಗಿದ್ದನು. ಬೆನ್ನತ್ತಿ ಹೋಗಿದ್ದ ಜಯಪ್ಪ ಹೊಲವೊಂದರಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದನು.

ಪ್ರಕರಣ ದಾಖಲಿಸಿಕೊಂಡ ದಾವಣಗೆರೆ ಗ್ರಾಮಾಂತರ ಪೊಲೀಸರು ಆರೋಪಿ ಜಯಪ್ಪನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 24 ಗಂಟೆಯಲ್ಲಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top