Connect with us

Dvgsuddi Kannada | online news portal | Kannada news online

ದಾವಣಗೆರೆ : ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಸರಗಳ್ಳತನ; ಆರೋಪಿಗಳ ಬಂಧನ; 14.50 ಲಕ್ಷ ಮೌಲ್ಯದ ಚಿನ್ನಾಭರಣ, ಬೈಕ್ ವಶ

dvg crime news

ದಾವಣಗೆರೆ

ದಾವಣಗೆರೆ : ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಸರಗಳ್ಳತನ; ಆರೋಪಿಗಳ ಬಂಧನ; 14.50 ಲಕ್ಷ ಮೌಲ್ಯದ ಚಿನ್ನಾಭರಣ, ಬೈಕ್ ವಶ

ದಾವಣಗೆರೆ: ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಸರಗಳ್ಳತನ ಮಾಡಯತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 14,50,000 ರೂ. ಬೆಲೆಯ ಚನ್ನಾಭರಣಗಳು ಹಾಗು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.

ಸರ ಕಿತ್ತುಕೊಂಡು ಪರಾರಿ

ಪುಷ್ಪ ಡಿ.ಪಿ. ವಿದ್ಯಾನಗರ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ದಿನಾಂಕ 22-04-2025 ರಂದು ಬೆಳಿಗ್ಗೆ ಸುಮಾರು 11.30 ಗಂಟೆ ಸಮಯದಲ್ಲಿ ಎಸ್.ಎಸ್ ಲೇಔಟ್ ‘ಬಿ’ ಬ್ಲಾಕ್ ನ ಚೌಡಮ್ಮನ ದೇವಸ್ಥಾನಕ್ಕೆ ಹೋಗಿ ವಾಪಾಸ್ ಮನೆಗೆ ಹೋಗಲು ಎಸ್.ಎಸ್ ಲೇಔಟ್ ಬಿ ಬ್ಲಾಕ್ 4 ನೇ ಮೇನ್ 12 ನೇ ಕ್ರಾಸ್ ರಸ್ತೆಯಲ್ಲಿ ಮಾಧ್ಯಾಹ್ನ 12.00 ಗಂಟೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಯಾರೋ ಒಬ್ಬ ಸ್ಕೂಟರ್ ಸವಾರ ಹಿಂದಿನಿಂದ ಬಂದು ಕೊರಳಿಗೆ ಏಕಾಏಕಿ ಕೈ ಹಾಕಿ ಕೊರಳಲ್ಲಿ 30 ಗ್ರಾಂ‌ನ ಎರಡು ಎಳೆ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಿಸಿದ್ದರು.

ಲಾರಿ, ಆಟೋ ಚಾಲಕರ ಕೈಚಳಕ

ಎಸ್ಪಿ ಉಮಾಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ್ ಎಂ. ಸಂತೋಷ, ಜಿ. ಮಂಜುನಾಥ, ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಿ ಶಿಲ್ಪಾ ವೈ.ಎಸ್ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಅಧಿಕಾರಿ,‌‌ಸಿಬ್ಬಂದಿಗಳು ಆರೋಪಿ ಪತ್ತೆಕಾರ್ಯ‌ ನಡೆಸಿದೆ. ಈ ತಂಡವು ದಿ:24.04.2025 ರಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದAತೆ ಆರೋಪಿತರಾದ 1)ಅರುಣ ಕುಮಾರ ಡಿ ಪಿ, (28) , ಆಟೋ ಚಾಲಕ ವಾಸ: ಭಾರತ ಕಾಲೋನಿ, ದಾವಣಗೆರೆ, 2) ಬಕ್ಕೇಶ (29) ಲಾರಿ ಚಾಲಕ, ವಾಸ: ಭಾರತ ಕಾಲೋನಿ, ದಾವಣಗೆರೆ ಇವರುಗಳನ್ನು ಬಂಧಿಸಿದ್ದು, ಸದರಿ ಆರೋಪಿತರು ಸರಗಳ್ಳತನ ಮಾಡಿದ ವಿದ್ಯಾನಗರ ಪೊಲೀಸ್ ಠಾಣೆಯ ಒಟ್ಟು 6 ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 176 ಗ್ರಾಂ ತೂಕದ 14,00,000/-ರೂ ಬೆಲೆಯ ಬಂಗಾರದ ಆಭರಣ ಹಾಗು ಕೃತ್ಯಕ್ಕೆ ಉಪಯೋಗಿಸಿದ 50 ಸಾವಿರ ರೂ ಬೆಲೆಯ ಒಂದು ಹೊಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ: ನಾಲ್ಕು ಕಳ್ಳತನ ಪ್ರಕರಣ; ಆರೋಪಿಗಳ ಬಂಧನ-5.85 ಲಕ್ಷ ಮೌಲ್ಯದ ಚಿನ್ನ, 9 ಮೊಬೈಲ್, 9 ಕುರಿ ವಶ

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿತರು ನ್ಯಾಯಾಂಗ ಬಂಧನದಲ್ಲಿ ಇರಿಸಕಾಗಿದೆ.ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top