Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಕಣುಮ ಹ*ತ್ಯೆ

dvg crime 1

ದಾವಣಗೆರೆ

ದಾವಣಗೆರೆ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಕಣುಮ ಹ*ತ್ಯೆ

ದಾವಣಗೆರೆ: ರೌಡಿಶೀಟರ್‌ನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ಈ ಹ*ತ್ಯೆ ನಡೆದಿದೆ. ಸಂತೋಷಕುಮಾರ್‌ ಅಲಿಯಾಸ್‌ ಕಣುಮ ಸಂತೋಷ್‌ (50) ಎ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊ*ಲೆ ಮಾಡಲಾಗಿದೆ.

ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಮಳಿಗೆಯಲ್ಲಿ ಕುಳಿತಿದ್ದಾಗ ಆಟೋದಲ್ಲಿ ಬಂದ ಗುಂಪುವೊಂದು ಕಣುಮನ ಮುಖಕ್ಕೆ ಕಾಳುಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹೊಡೆದು ಹ*ತ್ಯೆ ಮಾಡಿ ಪರಾರಿಯಾಗಿದ್ದಾರೆ. ರಿಯಲ್‌ ಎಸ್ಟೇಟ್‌ ನಲ್ಲಿ ತೊಡಗಿಕೊಂಡಿದ್ದ ಕೆಟಿಜೆ ನಗರದ ನಿವಾಸಿಯಾದ ಕಣುಮನ ವಿರುದ್ಧ ಕೊಲೆ, ವಂಚನೆ ಸೇರಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಗಳ ತಂಡವೊಂದು ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ರೌಡಿಶೀಟರ್ ಬುಳ್ಳ ನಾಗನ ಕೊಲೆ ಪ್ರಕರಣದಲ್ಲಿ ಕಣುಮ ಪ್ರಮುಖ ಆರೋಪಿಯಾಗಿದ್ದನು.

ಕೊ*ಲೆ  ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಶರಣ ಬಸವೇಶ್ವರ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್‌ ಮಾಹಿತಿ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top