ದಾವಣಗೆರೆ: ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗುತ್ತಿದ್ದ ಆಟೋಗಳನ್ನು ಹಿಡಿದು ಪೊಲೀಸರು 105 ಪ್ರಕರಣಗಳನ್ನು ದಾಖಲಿಸಿದ್ದಾರೆ. ಒಟ್ಟು 20600 ರೂ. ದಂಡ ವಿಧಿಸಲಾಗಿದೆ.
ಈ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ನಿರ್ದೇಶನದಂತೆ ಎಎಸ್ಪಿ ಮಂಜುನಾಥ ಜಿ ಹಾಗೂ ಡಿವೈಎಸ್ಪಿ ಶರಣಬಸವೇಶ್ವರ ಮಾರ್ಗದರ್ಶನದಲ್ಲಿ ದಾವಣಗೆರೆ ಸಂಚಾರ ವೃತ್ತ ಪೊಲೀಸ್ ನಿರೀಕ್ಷಕ ಮಂಜುನಾಥ ನಲವಾಗಲು ನೇತೃತ್ವದಲ್ಲಿ ದಕ್ಷಿಣ ಸಂಚಾರ & ಉತ್ತರ ಸಂಚಾರ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದಾರೆ.
ದಾವಣಗೆರೆ ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯ ಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋಗಳನ್ನು ಹಿಡಿದ್ದಾರೆ. ಈ ಸಂಬಂಧ ಒಟ್ಟು 105 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 20600/- ರೂ ಗಳು ದಂಡ ವಿಧಿಸಲಾಗಿದೆ.
ನಿಯಮ ಮೀರಿದ್ರೆ ಕಾನೂನು ಕ್ರಮ
ಇನ್ನೂ ಮುಂದೆ ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಸಂಚಾರ ನಿಯಮಗಳನ್ನು ಪಾಲಿಸಲು ಜಾಗೃತಿ ಮೂಡಿಸಲಾಗಿರುತ್ತದೆ.
ಶಾಲಾ ಆಟೋಚಾಲಕರು, ಇತರೆ ವಾಹನಗಳ ಗಮನಕ್ಕೆ
ದಾವಣಗೆರೆ ನಗರ ಹಾಗೂ ಜಿಲ್ಲೆಯಾದ್ಯಾಂತ ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋಚಾಲಕರು ಹಾಗೂ ಇತರೆ ವಾಹನಗಳಿಗೆ ಸೂಚಿಸುವುದೇನೆಂದರೆ ತಮ್ಮ ವಾಹನಗಳಲ್ಲಿ ಸಾಮರ್ಥ್ಯ ಕ್ಕಿಂತ (ನಿಯಮಕ್ಕಿಂತ) ಹೆಚ್ಚು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು ಒಂದು ವೇಳೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವುದು ಕಂಡುಬಂದಲ್ಲಿ ಹಾಗೂ ನಿಯಮ ಮೀರಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.