Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿ ಕೊ*ಲೆ ಮಾಡಿ ಕೇರಳಕ್ಕೆ ಪರಾರಿ; ಮಹಿಳೆ ಸೇರಿ ಇಬ್ಬರ ಬಂಧನ

crime sym

ಚನ್ನಗಿರಿ

ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿ ಕೊ*ಲೆ ಮಾಡಿ ಕೇರಳಕ್ಕೆ ಪರಾರಿ; ಮಹಿಳೆ ಸೇರಿ ಇಬ್ಬರ ಬಂಧನ

ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿ ಕೊ*ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಮಹಿಳೆ ಸಹುತ ಇನ್ಬಿಬ್ವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಗಳಾದ ಲಕ್ಷ್ಮೀ (38) , ಪ್ರಿಯಕರ ತಿಪ್ಪೇಶ್ ನಾಯ್ಕ್ (42) ಮತ್ತು ಸಂತೋಷ್‌ (40) ಎಂಬುವರನ್ನೂ ಪೊಲೀಸರು ಬಂಧಿಸಲಾಗಿದೆ.

ಪ್ರಕರಣ ಹಿನ್ನೆಲೆ ಏನು… ?

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆಯ ನಿವಾಸಿ ಲಕ್ಷ್ಮೀ ಮತ್ತು ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದ ನಿವಾಸಿಯಾಗಿದ್ದ ನಿಂಗಪ್ಪನನ್ನು ಎಂಟು ವರ್ಷದ ಹಿಂದೆ ಮದುವೆಯಾಗಿದ್ದಳು. ಮದುವೆಯಾಗಿ ಎಂಟು ವರ್ಷ ಕಳೆದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಮಕ್ಕಳನ್ನು ಪಡೆಯಲು ಲಕ್ಷ್ಮೀ ದೇವಾಲಯ, ಆಸ್ಪತ್ರೆ‌‌ ಅಂತೆಲ್ಲಾ ಸುತ್ತಿದ್ದಳು. ಆದರೆ, ನಿಂಗಪ್ಪನಿಗೆ ಮಕ್ಕಳಾಗುವ ಯೋಗವಿಲ್ಲ ಎಂಬುದು ಗೊತ್ತಾಗಿದೆ.

ಕೊಲೆಗೆ ಕಾರಣ ಏನು..?

ನಿಂಗಪ್ಪ ಅಡಿಕೆ ಖೇಣಿ ಕೆಲಸ ಮಾಡುತ್ತಿದ್ದನು. ಆತನ ಸ್ನೇಹಿತರಾದ ತಿಪ್ಪೇಶ್ ನಾಯ್ಕ್​ ಹಾಗೂ ಸಂತೋಷ್ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಆಗ, ತಿಪ್ಪೇಶ್ ನಾಯ್ಕ್​ಗೆ ಲಕ್ಷ್ಮೀಯ ಪರಿಚಯವಾಗಿದೆ. ಪರಿಚಯವಾಗಿ ಅನೈತಿಕ ಸಂಬಂಧ ಬೆಳದಿದೆ. ಇದರ ಪರಿಣಾಮವಾಗಿ ಲಕ್ಷ್ಮೀ ಗರ್ಭಿಣಿಯಾಗಿದ್ದಳು.

ತನಗೆ ಮಕ್ಕಳು ಆಗುವುದಿಲ್ಲ ಎಂದು ತಿಳಿದಿದ್ದರೂ ಪತ್ನಿ ಗರ್ಭಿಣಿಯಾಗಿದ್ದರಿಂದ ಅನುಮಾನಗೊಂಡ ನಿಂಗಪ್ಪ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದನು. ಪತಿಯ ವರ್ತನೆಗೆ ಕೋಪಗೊಂಡ ಲಕ್ಷ್ಮೀ ನಾನು ತಾಯಿಯಾಗುವ ಭಾಗ್ಯವನ್ನು ಹಾಳು ಮಾಡಿದ ಪತಿ ನಿಂಗಪ್ಪನನ್ನು ಕೊಲೆ ಮಾಡಬೇಕೆಂದು ನಿರ್ಧರಿಸಿ ಸಂಚು ರೂಪಿಸಿದಳು.

ಪತ್ನಿ, ಸ್ನೇಹಿತರಿಂದಲೇ ಕೊಲೆ

2024 ರ ಜನವರಿ 18 ರಂದು ಲಕ್ಷ್ಮೀ ತನ್ನ ಪ್ರಿಯಕರ ತಿಪ್ಪೇಶ್ ನಾಯ್ಕ ಜೊತೆ ಸೇರಿಕೊಂಡು ನಿಂಗಪ್ಪನನ್ನು ಪಾರ್ಟಿ ಮಾಡಿಸುವ ನೆಪದಲ್ಲಿ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ, ಲಕ್ಷ್ಮೀ ಮತ್ತು ತಿಪ್ಪೇಶ್​ ಇಬ್ಬರೂ ಸೇರಿಕೊಂಡು ನಿಂಗಪ್ಪನಿಗೆ ಕಂಠಪೂರ್ತಿ ಕುಡಿಸಿದ್ದಾರೆ. ಮದ್ಯದ ನಶೆಯಲ್ಲಿದ್ದ ನಿಂಗಪ್ಪನನ್ನು ಬಸವಾಪುರ ಗ್ರಾಮದ ಬಳಿರುವ ಭದ್ರಾ ನಾಲೆಯಲ್ಲಿ ತಳಿದ್ದಾರೆ. ಬಳಿಕ, ಪತಿ ನಿಂಗಪ್ಪ ಭದ್ರಾ ನಾಲೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎಂದು ಲಕ್ಷ್ಮೀ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪೊಲೀಸರು ಭದ್ರಾ ನಾಲೆಯಲ್ಲಿ ಎಷ್ಟೇ ಶೋಧ ಕಾರ್ಯಾ ನಡೆಸಿದರೂ ನಿಂಗಪ್ಪ ಪತ್ತೆಯಾಗಿರಲಿಲ್ಲ. ಇದಾದ ಬಳಿಕ ಲಕ್ಷ್ಮೀ ತವರು ಮನೆ ಸೇರಿದ್ದಾಳೆ. ಇತ್ತ ತಿಪ್ಪೇಶ್ ನಾಯ್ಕ್​ ಕೆಲಸಕ್ಕೆಂದು ಕೇರಳಕ್ಕೆ ಹೋಗಿ ಅಲ್ಲಿಯೇ ಸೆಟಲ್​ ಆಗಿದ್ದಾನೆ. ನಂತರ ತಿಪ್ಪೇಶ್​ ಪ್ರೇಯಸಿ ಲಕ್ಷ್ಮೀಯನ್ನು ಕೇರಳಕ್ಕೆ ಕರೆಸಿಕೊಂಡಿದ್ದಾನೆ. ಲಕ್ಷ್ಮೀ ತನ್ನ ತವರು ಮನೆಯಲ್ಲಿ ಯಾರಿಗೂ ಹೇಳದೆ ಹೋಗಿದ್ದಾಳೆ. ಆಗ, ಲಕ್ಷ್ಮೀ ತವರು ಮನೆಯವರು ಲಕ್ಷ್ಮೀ ಕಾಣೆಯಾಗಿದ್ದಾಳೆ ಎಂದು ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲಕ್ಷ್ಮೀ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ತಿಪ್ಪೇಶ್ ನಾಯ್ಕ್​ನ ಸ್ನೇಹಿತ ಸಂತೋಷ್​ನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಲಕ್ಷ್ಮೀ ಹಾಗೂ ತಿಪ್ಪೇಶ್ ನಾಯ್ಕನಿಗೆ ಅಕ್ರಮ ಸಂಬಂಧ ಇದೆ. ಲಕ್ಷ್ಮೀ ಗಂರ್ಭಿಣಿಯಾದಾಗ ನಿಂಗಪ್ಪ ಗರ್ಭಪಾತ ಮಾಡಿಸಿದ್ದನು. ಇದರಿಂದ ಕೋಪಗೊಂಡ ಲಕ್ಷ್ಮೀ, ಪ್ರಿಯಕರ ತಿಪ್ಪೇಶ್​ ಜೊತೆ ಸೇರಿಕೊಂಡು ಪತಿ ನಿಂಗಪ್ಪನನ್ನು ಕೊಲೆ ಮಾಡಿದ್ದಾಳೆ ಎಂದು ಬಾಯಿ ಬಿಟ್ಟಿದ್ದಾನೆ. ಈ ಪ್ರಕರಣದಲ್ಲಿ ಕೊಲೆ ನಡೆದಿರುವುದು ದೃಢಪಟ್ಟಿದ್ದು ಆರೋಪಿಗಳು ಜೈಲು ಸೇರಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top