ದಾವಣಗೆರೆ: ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಹುಂಡಿ ಕಳವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಎಂಸಿಸಿ ‘ಬಿ’ ಬ್ಲಾಕ್ ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಹುಂಡಿ ಕಳ್ಳತನವಾಗಿದೆ. ನಿನ್ನೆ (ಏ.16) ತಡ ರಾತ್ರಿ ಈ ಘಟನೆ ಸಂಭವಿಸಿದೆ. ಹುಂಡಿ ಹೊಡೆದು ಹಣ ದೋಚಿ ಪರಾರಿಯಾಗಿದ್ದಾರೆ. ದೇವಸ್ಥಾನದ ಮುಖ್ಯ‌ ದ್ವಾರದ ಬೀಗ ಹೊಡೆಯಲು ಕಳ್ಳರು ಪ್ರಯತ್ನಿಸಿದ್ದು,  ಅದು ಸಾಧ್ಯವಾಗದಿದ್ದಾಗ   ಉತ್ತರ ದ್ವಾರದ ಕಬ್ಬಿಣದ ಸರಳುಗಳನ್ನು ಆಯುಧಗಳಿಂದ ಮುರಿದು ದೇವಸ್ಥಾನ ಪ್ರವೇಶ ಮಾಡಿದ್ದಾರೆ. ನಂತರ ಹುಂಡಿಗಳನ್ನು ಹೊಡೆದು ಹಣವನ್ನದೋಚಿಕೊಂಡು ಹೋಗಿದ್ದಾರೆ.

ದೇವಸ್ಥಾನ ಸಮಿತಿ ಎರಡು ತಿಂಗಳ ಹಿಂದೆಯಷ್ಟೇ  ಹುಂಡಿ ಏಣಿಕೆ ಮಾಡಿದ್ದರಿಂದ  ಅಂದಾಜು 50 ಸಾವಿರ ಹಣ ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ.  ಇನ್ನು  ದೇವರ ಅಭರಣಗಳಿದ್ದ ಕೊಠಡಿ ಬಾಗಿಲನ್ನು ಸಹ ಕಳ್ಳರು ತೆರೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ.  ಸಿಸಿಟಿವಿ  ಗಳನ್ನು ಕಳ್ಳರು ಹಾನಿಮಾಡಿದ್ದಾರೆ.  ಪೊಲೀಸರು ತನಿಖೆ ಕೈಗೊಂಡಿದ್ಧಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *