ದಾವಣಗೆರೆ: ಶ್ರೀರಾಮನ, ಚಾಮುಂಡೇಶ್ವರಿ ದೇವಿ ಫ್ಲೆಕ್ಸ್ ಹರಿದು ವಿರೂಪ; 5 ಆರೋಪಿಗಳ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಸರಾ ಹಬ್ಬದ ಸಂದರ್ಭದಲ್ಲಿ ಶ್ರೀರಾಮನ, ಚಾಮುಂಡೇಶ್ವರಿ ದೇವಿ ಫ್ಲೆಕ್ಸ್ ಹರಿದು ವಿರೂಪಗೊಳಿದ ಆರೋಪ‌ದ ಮೇಲೆ 5 ಆರೋಪಿಗಳನ್ನು ಆಜಾದ್ ನಗರ‌ ಪೊಲೀಸರು ಬಂಧನ ಮಾಡಿದ್ದಾರೆ.

ರಾತ್ರಿ ವೇಳೆ ಹಾನಿ

ಅ. 03ರಂದು ಬೆಳಗಿನ ಜಾವ 4-00 ಗಂಟೆ ಸಮಯದಲ್ಲಿ ಗಸ್ತಿನಲ್ಲಿರುವಾಗ ದಸರಾ ಹಬ್ಬದ ಸಂಬಂಧವಾಗಿ ಅರಳಿಮರ ಸರ್ಕಲ್ ಹತ್ತಿರ ಗಸ್ತು ಮಾಡುತ್ತಿರುವಾಗ ಆಜಾದ್ ನಗರ ಠಾಣಾ ವ್ಯಾಪ್ತಿಯ ಬೇತೂರು ರಸ್ತೆಯ ಇಮಾಂ ನಗರದ 5ನೇ ಕ್ರಾಸ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಳವಡಿಸಿದ ಶ್ರೀರಾಮನ ಭಾವಚಿತ್ರಕ್ಕೆ ಹಾಗೂ ಮುದ್ದಬೋವಿ ಕಾಲೋನಿಯ 2 ನೇ ಕ್ರಾಸ್ ನಲ್ಲಿ ಅಳವಡಿಸಿದ್ದ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಯಾರೋ ಕಿಡಿಗೆಡಿಗಳು ರಾತ್ರಿ ವೇಳೆಯಲ್ಲಿ ಹಾನಿ ಮಾಡಿದ್ದರು.

ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಒಂದು ಕೋಮಿನ ಭಾವನೆಗಳಿಗೆ ಹಾನಿ ಮಾಡುವ ಉದ್ದೇಶದಿಂದ ಅಳವಡಿಸಿದ್ದ ಭಾವಚಿತ್ರವನ್ನು ಹರಿದು ಮತೀಯ ದ್ವೇಷ, ವೈಮನಸ್ಸು ಉಂಟು ಮಾಡಿ ಸಮಾಜದಲ್ಲಿ ಶಾಂತಿಯನ್ನು ಕದಡುವ ಕೃತ್ಯ ಎಸಗಿದ್ದ ಬಗ್ಗೆ ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಐವರು ಆರೋಪಿಗಳ ಬಂಧನ

ಸದರಿ ಪ್ರಕರಣದ ಆರೋಪಿಗಳ ಪತ್ತೆ ಮಾಡಲು ಪೊಲೀಸ್ ಎಸ್ಪಿ ಉಮಾಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗ್ಡೆ ಮಾರ್ಗದರ್ಶದನದಲ್ಲಿ ಡಿವೈಎಸ್ಪಿ ಶರಣ ಬಸವೇಶ್ವರ ಬಿ ನೇತೃತ್ವದಲ್ಲಿ ಆಜಾದ್ ನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಉಸ್ತುವಾರಿಯಲ್ಲಿ ಅಧಿಕಾರಿ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ಈ ತಂಡ ಪ್ರಕರಣದ ಆರೋಪಿತರಾದ 1). ಮುಕ್ತಿಯಾರ್ 2). ಆಬೀದ್, 3). ಆತಿಕ್ , 4). ಸಾಧಿಕ್, 5). ಅಮಾನುಲ್ಲಾ ಬಂದಿಸುವಲ್ಲಿ ಯಶಸ್ವಿಯಾಗಿದ್ದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ಆರೋಪಿ ಪತ್ತೆ ಹಚ್ಚಿ ಬಂದಿಸುವಲ್ಲಿ ಯಶಸ್ವಿಯಾದ ಲಕ್ಷ್ಮಣ ನಾಯ್ಕ್ ಪೊಲೀಸ್ ನಿರೀಕ್ಷಕರು ಆಜಾದ್ ನಗರ ಪೊಲೀಸ್ ಠಾಣೆ, ಸಿಬ್ಬಂದಿಗಳಾದ ಎ ಎಸ್ ಐ ಚಂದ್ರಪ್ಪ, ಎ ಎಸ್ ಐ ಈರಣ್ಣ ಸ್ವಾಮಿ, ಮಂಜುನಾಥ ನಾಯ್ಕ್, ಕೃಷ್ಣಪ್ಪ ನಂದ್ಯಾಲ್, ವೆಂಕಟೇಶ್, ಜಿ.ಆರ್ ಗುಗ್ಗರಿ ಲೋಕೇಶ್, ಖಾಜಾ ಹುಸೇನ್ ಅತ್ತಾರ್, ಸಲಹುದ್ದಿನ್ , ಮಾಲತೇಶ ಕೆಳಗಿನಮನಿ, ಪರಶುರಾಮ್ ಅವರನ್ನು ಪ್ರಶಂಸಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *