ದಾವಣಗೆರೆ; ಬೆಂಗಳೂರಲ್ಲಿ ಇತ್ತೀಚೆಗೆ ಎಟಿಎಂಗೆ ಹಣ ತುಂಬುವ ವಾಹನ ಅಡ್ಡಗಟ್ಡಿ 7 ಕೋಟಿ ದರೋಡೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಪಿಸಿ ಭಾಗಿಯಾಗಿರುವ ಪ್ರಕರಣದ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಇದೀಗ ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿ ಬಳಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆಯ ಇಬ್ಬರು ಪಿಎಸ್ಐ ಸಾಥ್ ನೀಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಪಿಎಸ್ ಐ ಸೇರಿದಂತೆ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇನ್ಮುಂದೆ ದಾವಣಗೆರೆಯಿಂದ ಮಂತ್ರಾಲಯಕ್ಕೆ ಪ್ರತಿನಿತ್ಯ ಎಸಿ ವೋಲ್ವೊ ಬಸ್ ಸೌಲಭ್ಯ; ಸಮಯ, ಮಾರ್ಗ ವಿವರ ಇಲ್ಲಿದೆ..
ಪ್ರಕರಣದ ತನಿಖೆಯನ್ನು ಎಸ್ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿ ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ದಾವಣಗೆರೆ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು. ಈ ತಂಡ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಹಾಗೂ ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರು ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ; ಅಡಿಕೆ ದರ ದಿಢೀರ್ ಕುಸಿತ; ನ.24ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಈ ಇಬ್ಬರು ಆರೋಪಿಗಳು ಪಿಎಸ್ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು. ಈ ಇಬ್ಪರು ಎಸ್ಐಗಳು ವರ್ಗಾವಣೆ ಆಗಿ ಐಜಿ ಅಫೀಸ್ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ದಾವಣಗೆರೆ ವಿ. ವಿ. ಸಿಂಡಿಕೇಟ್ ಸದಸ್ಯರಾಗಿ ಎಜಿಬಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಭರಮಗೌಡ ಪಾಟೀಲ್ ನೇಮಕ
ಪೊಲೀಸ್ ಐಡಿ ಕಾರ್ಡ್ ತೋರಿಸಿ ಹೆದರಿಸಿದ ಪಿಎಸ್ ಐಗಳು
ಕಾರವಾರ ಮೂಲದ ಚಿನ್ನದ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 78 ಗ್ರಾಂ ಗಟ್ಟಿ ಬಂಗಾರದ ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಪಿಎಸ್ ಐ ಮಾಳಪ್ಪ , ಪ್ರವೀಣ್ ಬಸ್ ಹತ್ತಿಕುಳಿತಿದ್ದ ಚಿನ್ನದ ವ್ಯಾಪಾರಿಗೆ ನಾವು ಐಜಿ ಸ್ಕ್ವಾಡ್ ಎಂದು ಹೇಳಿ ಹೆದರಿಸಿದ್ದರು. ಬಸ್ ನಿಂದ ಕೆಳಗೆ ಇಳಿಸಿ ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದು, ಒಳಗೆ ಹೋಗದೆ ವಾಪಸ್ ಕರೆತಂದಿದ್ದರು.
8 ಲಕ್ಷ ಮೌಲ್ಯದ ಗಟ್ಟ ಚಿನ್ನ , ಮೂರು ಕಾರು ವಶ
ಬಳಿಕ ವ್ಯಾಪಾರಿಯ ಬಳಿ ಇದ್ದ ಬಂಗಾರವನ್ನು ಕಸಿದುಕೊಂಡು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು. ಬಂಗಾರ ಕಳೆದುಕೊಂಡ ವ್ಯಾಪಾರಿ ಕೆಟೆಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಕೆಟಿಜೆ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳಿಂದ ಸುಮಾರು 8 ಲಕ್ಷ ಮೌಲ್ಯದ ಬಂಗಾರದ ಗಟ್ಟಿ, ಆಭರಣಗಳನ್ನು ಹಾಗೂ 03 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.



