ದಾವಣಗೆರೆ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳೆದ ನವೆಂಬರ್ 30ರವರೆಗೆ ವರದಿಯಾಗಿದ್ದ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 20.38 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಮರಳಿಸಲಾಗಿದೆ.
ದಾವಣಗೆರೆ: ಅಡಿಕೆ ದರ ಮತ್ತೆ ಕುಸಿತ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದ ಆವರಣದಲ್ಲಿ ಪೂರ್ವ ವಲಯ ಡಿಜಿಪಿ ಬಿ.ಆರ್. ರವಿಕಾಂತೇಗೌಡ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಪ್ರಾಪರ್ಟಿ ರಿಟರ್ನ್ ಪರೇಡ್ನಲ್ಲಿ ವಾರಸುದಾರರಿಗೆ ಸ್ವತ್ತು ವಾಪಸ್ ನೀಡಲಾಯಿತು.
ದಾವಣಗೆರೆ: ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಖಾದ್ಯಗಳ ಪಾಕ ಸ್ಪರ್ಧೆ
2025 ಸಾಲಿನಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಕಾರ್ಯಚರಣೆ ನಡೆಸಿ ಒಟ್ಟು 173 ಪ್ರಕರಣಗಳನ್ನು ಪತ್ತೆ ಮಾಡಿದ್ದು, ಈ ಪ್ರಕರಣಗಳಲ್ಲಿನ ಅಂದಾಜು 19,64,52,459 ರೂ. ಮೌಲ್ಯದ ಸುಮಾರು 24 ಕೆಜಿ 726 ಗ್ರಾಂ ತೂಕದ ಬಂಗಾರ ಆಭರಣ ಮತ್ತು 24,35,362 ರೂ. ಮೌಲ್ಯದ 26 ಕೆಜಿ 672 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ವಾರಸುದಾರರಿಗೆ ಮರಳಿಸಲಾಗಿದೆ.
85,68,938 ರೂ. ನಗದು ಹಣ, 46,28,517 ರೂ. ಮೌಲ್ಯದ 90 ವಿವಿಧ ಮಾದರಿ ವಾಹನಗಳು, 73,80,000 ರೂ. ಮೌಲ್ಯದ 492 ವಿವಿಧ ಮಾದರಿಯ ಮೊಬೈಲ್ ಗಳು ಹಾಗೂ 16,81,000 ರೂ. ಮೌಲ್ಯದ ಕೃಷಿ ಉಪಕರಣಗಳನ್ನು ಮರಳಿಸಲಾಗಿದೆ. ಇವುಗಳ ಒಟ್ಟು ಮೌಲ್ಯ 20.38 ಕೋಟಿ ರೂ. ಆಗಿದೆ.
ಪ್ರಾಪರ್ಟಿ ಪೇರೆಡ್ನಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗಿಸ್, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್. ಬಸವರಾಜ್, ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್ಪಿ ಬಿ. ಶರಣಬಸವೇಶ್ವರ, ಡಿಎಆರ್ ಡಿವೈಎಸ್ಪಿ ಪಿ.ಬಿ. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.



