ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಭರ್ಜರಿ ಲಾಭದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 76.48 ಲಕ್ಷ ಆನ್ ಲೈನ್ ವಂಚನೆ ನಡೆಸಿದ ಘಟನೆ ನಡೆದಿದೆ.
ತಂತ್ರಜ್ಞಾನ ಮುಂದುವರೆದಂತೆ ಸೈಬರ್ ವಂಚಕರ (Cyber fraud) ಹಾವಳಿ ಮಿತಿಮೀರಿದ್ದು, ಜನರಿಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ದಾವಣಗೆರೆಯ ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಫೇಸ್ ಬುಕ್ ನಲ್ಲಿ ಪರಿಚಯನಾದ ಸೈಬರ್ ವಂಚಕ 76.48 ಲಕ್ಷ ರೂ. ವಂಚನೆ ಮಾಡಿದ್ದಾರೆ.
ದಾವಣಗೆರೆ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರೋಗ್ಯ ಕಾರ್ಡ್ ; ರಾಜ್ಯದಲ್ಲೇ ಪ್ರಥಮ ಬಾರಿಗೆ ಜ.1ರಿಂದ ಯೋಜನೆ ಜಾರಿ: ಸಿಇಒ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿದ ವಂಚಕರು ಈ ಕೃತ್ಯ ಎಸಗಿದ್ದಾರೆ. ವಂಚಕನ ಮಾತು ನಂಬಿ ಸೆಪ್ಟೆಂಬರ್ನಿಂದ ಡಿಸೆಂಬರ್ವರೆಗೆ ವಿವಿಧ ಬ್ಯಾಂಕ್ಗಳಿಂದ ಹಣ ವರ್ಗಾವಣೆ ಮಾಡಲಾಗಿತ್ತು ಎಂದು ಗೊತ್ತಾಗಿದೆ.
ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿ ಭರ್ಜರಿ ಲಾಭ ಬರಲಿದೆ ಎಂಬ ಆಸೆಯನ್ನು ತೋರಿಸಲಾಗಿತ್ತು. ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡುವಂತೆ ಪ್ರೆರೇಪಿಸಿ ಮೋಸ ಮಾಡಲಾಗಿದೆ. ಯಾವುದೇ ಕ್ಷಣದಲ್ಲಿ ವಿತ್ ಡ್ರಾ ಮಾಡುವ ಆಸೆಯನ್ನು ಸಹ ನೀಡಲಾಗಿತ್ತು.
ಹಣ ವಾಪಸ್ ಪಡೆಯಲು ಹೋದಾಗ ಹಣ ಬಾರದೇ ಇದ್ದಾಗ ವಂಚನೆ ಜಾಲಕ್ಕೆ ಸಿಲುಕಿದ್ದು ಗೊತ್ತಾಗಿದೆ. ವಂಚನೆಗೊಳಗಾಗಿದ್ದು ಗೊತ್ತಾಗುತ್ತಿದ್ದಂತೆ ದಾವಣಗೆರೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



