ದಾವಣಗೆರೆ: ಕಂಟ್ರಾಕ್ಟರೊಬ್ಬರು ಮನೆಗೆ ಬೀಗ ಹಾಕಿ ಹೊರಗಡೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಬೀಗ ಮುರಿದು 2.2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ನಗರದ ಇಡಬ್ಲ್ಯೂಎಸ್ ಕಾಲೋನಿಯ ನಿವಾಸಿ ಕಂಟ್ರಾಕ್ಟರ್ ನಿಸಾರ್ ಅಹ್ಮದ್ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಹೊರಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಬಸವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



