ದಾವಣಗೆರೆ: ಕಾಂಗ್ರೆಸ್ ಮುಖಂಡ, ಧೂಡಾ ಮಾಜಿ ಅಧ್ಯಕ್ಷ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಆಪ್ತ ಆಯೂಬ್ ಪೈಲ್ವಾನ್ ಪುತ್ರನ ವಿರುದ್ಧ ಗುಂಪು ಘರ್ಷಣೆಯ ಸಂಬಂಧ ನಗರದ ಎರಡು ಠಾಣೆಯಲ್ಲಿ 4 ಪ್ರಕರಣ ದಾಖಲಾಗಿದೆ.
ತರಳಬಾಳು ಮಹೋತ್ಸವ ಕೊನೆ ದಿನದ ನೇರ ಪ್ರಸಾರ ವೀಕ್ಷಿಸಿ…live
ನಿನ್ನೆ (ಜ.31) ಮಧ್ಯಾಹ್ನ ಸಮಯದಲ್ಲಿ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಆವರಣದಲ್ಲಿ ಎರಡು ಗುಂಪುಗಳ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ಈ ಘಟನೆ ಹಾಗೂ ಆಜಾದ್ ನಗರದ ಇಮಾಮ್ ನಗರದಲ್ಲಿ ನಡೆದ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ಒಟ್ಟು 04 ಪ್ರಕರಣಗಳು ದಾಖಲಾಗಿವೆ. ಒಟ್ಟು ಇಬ್ಬರ ಬಂಧನ ಮಾಡಿದ್ದು, ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದಾವಣಗೆರೆ: ಚಿನ್ನಾಭರಣ ಕಳವು ಪ್ರಕರಣದಲ್ಲಿ 31 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ, ಎಎಸ್ಪಿ ಮಾರ್ಗದರ್ಶನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಾಯತ್ರಿ, ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ ಕುಪ್ಪೇಲೂರು ಹಾಗೂ ಸಿಬ್ಬಂದಿಗಳ ತಂಡ ಆರೋಪಿತರುಗಳಾದ 1) ಫೈಜಾನ್ (19) 2) ಧೂಡಾ ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್, ಪುತ್ರ ಹಸನ್ ಪೈಲ್ವಾನ್ ( 27) ಪುತ್ರನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಉಳಿದ ಆರೋಪಿತರ ಪತ್ತೆ ಕಾರ್ಯ ಮುಂದುವರೆದಿರುತ್ತದೆ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಬಂಧನ ತೆರಳಿದ್ದ ಬಡಾವಣೆ ಠಾಣೆ ಇನ್ಸ್ಪೆಕ್ಟರ್ ಗಾಯತ್ರಿ, ಕಾನ್ಸ್ಟೇಬಲ್ಗಳಾದ ಕೆಂಚಪ್ಪ ಮತ್ತು ಹರೀಶ್ ಸೇರಿ ತಂಡ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಆರೋಪಿ ಹಸನ್ ಮತ್ತು ಸ್ನೇಹಿತರ ಗುಂಪು ಪೊಲೀಸರ ಮೇಲೆಯೇ ದಾಳಿ ನಡೆಸಿದ ಆರೋಪ ಕೇಳಿಬಂಧಿದೆ. ಘಟನೆಯಲ್ಲಿ ಗಾಯಗೊಂಡಿರೋ ಪೊಲೀಸ್ ಸಿಬ್ಬಂದಿ ಕೆಂಚಪ್ಪ ಮತ್ತು ಹರೀಶ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



