ದಾವಣಗೆರೆ: ಜಿಲ್ಲೆಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಸಂಗ್ರಹ, ಸಾಗಾಟ, ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಳ್ಳಾರಿ ಜೈಲ್ಲಿಗೆ ಕಳುಹಿಸಲಾಗಿದೆ.
2027 ಡಿಸೆಂಬರ್ ಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಸಚಿವ ವಿ. ಸೋಮಣ್ಣ
ಜಿಲ್ಲೆಯ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಜಾಕೀರ್ (55), ವಾಸ: ಸಂತೇಬೆನ್ನೂರು ಗ್ರಾಮ, ಚನ್ನಗಿರಿ ತಾಲ್ಲೂಕು.ಈತ ಮಾದಕ ವಸ್ತುಗಳನ್ನು ಸಂಗ್ರಹ, ಮಾರಾಟ, ಸಾಗಾಟ ಮಾಡುವುದು ವೃತ್ತಿ ಮಾಡಿಕೊಂಡಿದ್ದನು. ಆರೋಪಿ ವಿರುದ್ಧ ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 06 ಪ್ರಕರಣಗಳು ದಾಖಲಾಗಿದ್ದು, 04 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ದಂಡ ಮತ್ತು ಶಿಕ್ಷೆಯನ್ನು ವಿಧಿಸಿರುತ್ತದೆ. ಇನ್ನೂ 02 ಪ್ರಕರಣಗಳು ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುತ್ತವೆ.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹರಿಹರ ಸೇರಿದ್ರೆ ಇನ್ನಷ್ಟು ಅಭಿವೃದ್ಧಿ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ಜಾಕೀರ್ ನಿಷೇಧಿತ ಮಾದಕ ವಸ್ತುಗಳನ್ನು ಕಾನೂನು ಬಾಹಿರವಾಗಿ ಸಂಗ್ರಹ, ಮಾರಾಟ, ಸಾಗಾಟ ಮಾಡುವುದನ್ನು ನಿರಂತರವಾಗಿ ರೂಢಿಸಿಕೊಂಡಿರುತ್ತಾರೆ. ಅಲ್ಲದೇ ಇವರು ಇಂತಹ ಕೃತ್ಯಗಳನ್ನು ಮುಂದುವರೆಸುವ ಸಾಧ್ಯತೆ ಹೆಚ್ಚಾಗಿದೆ. ಆರೋಪ ದೃಢಪಟ್ಟಿರುವುದರಿಂದ ಆರೋಪಿತ ಜಾಕೀರ್ ನನ್ನು ಬಳ್ಳಾರಿ ಕಾರಾಗೃಹದಲ್ಲಿ ಬಂಧನದಲ್ಲಿಡಲು ಆದೇಶ ಮಾಡಲಾಗಿದೆ.
ಅದರಂತೆ ಆರೋಪಿಯನ್ನು ದಿನಾಂಕ:25/02/2026 ರಂದು ಬಳ್ಳಾರಿ ಕಾರಾಗೃಹಕ್ಕೆ ಬಿಡಲಾಗಿರುತ್ತದೆ. ಪೂರ್ವ ವಲಯದ ಜಿಲ್ಲೆಗಳಲ್ಲಿ ಆಕ್ರಮ ಮಾದಕ ವಸ್ತುಗಳ ಸಂಗ್ರಹ, ಸಾಗಾಟ & ಮಾರಾಟ ಮಾಡುವುದನ್ನು ಕಟ್ಟು ನಿಟ್ಟಾಗಿ ತಡೆಗಟ್ಟುವ ನಿಟ್ಟಿನಲ್ಲಿ ಶ್ರೀ ಬಿ. ಆರ್. ರವಿಕಾಂತೇಗೌಡ, ಐ.ಪಿ.ಎಸ್. ಮಾನ್ಯ ಪೊಲೀಸ್ ಮಹಾ ನಿರೀಕ್ಷಕರು, ಪೂರ್ವ ವಲಯ, ದಾವಣಗೆರೆ ರವರು ಆದೇಶಮಾಡಿರುತ್ತಾರೆ. ಇದು ಪೂರ್ವ ವಲಯದ ಜಿಲ್ಲೆಗಳಲ್ಲಿ ಇದೇ ಮೊದಲ ಪ್ರಕರಣವಾಗಿರುತ್ತದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಶೇಖರ್ ಹೆಚ್.ಟಿ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.



