ದಾವಣಗೆರೆ: ಜಮೀನು ವಿವಾದಕ್ಕೆ ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ 41 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಅಕ್ರಮ ಮಾದಕ ವಸ್ತು ಸಂಗ್ರಹ, ಸಾಗಾಟ, ಮಾರಾಟ; ಆರೋಪಿ ಬಳ್ಳಾರಿ ಜೈಲಿಗೆ
ದಾವಣಗೆರೆ ತಾಲ್ಲೂಕಿನ ಹಾಲುವರ್ತಿಯ ಹನುಮಂತಪ್ಪ (82) ಬಂಧಿತನಾಗಿದ್ದು, ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಜಮೀನು ವಿವಾದಕ್ಕೆ ನಡೆದ ಗಲಾಟೆಯಲ್ಲಿ ಮಹಿಳೆ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದನು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗದ ಆರೋಪಿಯ ವಿರುದ್ಧ ಪ್ರಕರಣವನ್ನು ಪೊಲೀಸರು 1989ರಲ್ಲಿ ಪತ್ತೆಯಾಗದ ಪ್ರಕರಣಗಳ ಪಟ್ಟಿಗೆ ಸೇರಿಸಿದ್ದರು.
ದಾವಣಗೆರೆ: ಅಡಿಕೆ ಬೆಲೆ ಕಳೆದ ಒಂದು ವಾರದಿಂದ ಏರುತ್ತಲೇ ಇಲ್ಲ; ಎಷ್ಟಿದೆ ಇಂದಿನ ಬೆಲೆ ..?
ಎಸ್ಪಿ ಎಚ್.ಟಿ. ಶೇಖರ್ ಸೂಚನೆಯ ಮೇರೆಗೆ ಆರೋಪಿಗಳ ಪತ್ತೆಗೆ ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ. ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ತಾಲ್ಲೂಕಿನ ಹಾಲೇಕಲ್ಲು ಗ್ರಾಮದಲ್ಲಿ ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಇಬ್ಬರು ಆರೋಪಿಗಳು ಮೃತಪಟ್ಟಿದ್ದಾರೆ.



