ದಾವಣಗೆರೆ: ಖೋಟಾ ನೋಟು ತಯಾರಿಸಿ ಚಲಾವಣೆ ಮಾಡಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 40 ಸಾವಿರ ರೂ. ದಂಡ ವಿಧಿಸಿ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ; ದಾವಣಗೆರೆ ಕೆ.ಎಂ. ಸುರೇಶ್ ಬಿಜೆಪಿ ಅಭ್ಯರ್ಥಿ
ದಾವಣಗೆರೆ ಯಲ್ಲಮ್ಮ ನಗರದ ಎಸ್. ಅಶೋಕ ಹಾಗೂ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದ ಹಾಲೇಶ ಅಲಿಯಾಸ್ ಅರಸನಾಳು ಹಾಲೇಶ ಶಿಕ್ಷೆಗೊಳಗಾದವರು. 10.8.2022ರಂದು ಯಲ್ಲಮ್ಮ ನಗರದ ಮನೆಯೊಂದರಲ್ಲಿ ನಕಲಿ ನೋಟು ಚಲಾವಣೆ ಮಾಡಲು ಇಬ್ಬರು ವ್ಯಕ್ತಿಗಳು ಸಿದ್ಧತೆ ನಡೆಸುತ್ತಿರುವ ಬಗ್ಗೆ ಅಂದಿನ ಡಿಸಿಆರ್ಬಿ ಡಿವೈಎಸ್ಪಿ ಬಿ.ಎಸ್. ಬಸವರಾಜ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದರು.
ದಾವಣಗೆರೆ: ಜಿಲ್ಲೆಯಲ್ಲಿ ಅಡುಗೆ ಅನಿಲ ಕೊರತೆಯಿಲ್ಲ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ
ಸಾರ್ವಜನಿಕರಿಗೆ ವಂಚಿಸುವ ಉದ್ದೇಶದಿಂದ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಪೊಲೀಸರ ತನಿಖಾ ವರದಿಯನ್ನು ಪುರಸ್ಕರಿಸಿದ ನ್ಯಾಯಾಧೀಶರಾದ ಆರ್.ಎನ್. ಪ್ರವೀಣಕುಮಾರ್ ಈ ಶಿಕ್ಷೆ ವಿಧಿಸಿದ್ದಾರೆ.
ದಾಳಿ ವೇಳೆ 500 ರೂ. ಮುಖಬೆಲೆಯ 183 ನಕಲಿ ನೋಟು, 200 ರೂ. ಮುಖಬೆಲೆಯ 133 ಹಾಗೂ 100 ರೂ. ಮುಖಬೆಲೆಯ 26 ನೋಟುಗಳು ಸೇರಿದಂತೆ ಒಟ್ಟು 342 ನಕಲಿ ನೋಟುಗಳು ಪತ್ತೆಯಾಗಿದ್ದವು. ಮನೆಯಲ್ಲೇ ಕುಳಿತು ಕಲರ್ ಜೆರಾಕ್ಸ್ ಯಂತ್ರದ ಮೂಲಕ ಈ ನೋಟುಗಳನ್ನು ಸಿದ್ಧಪಡಿಸುತ್ತಿ ರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಈ ಸಂಬಂಧ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿಇಎನ್ ಇನ್ಸ್ಪೆಕ್ಟರ್ ಬಿ. ಮಂಜುನಾಥ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳು ಎಪ್ಸನ್ ಕಂಪನಿ ಪ್ರಿಂಟರ್, ಪೇಪರ್ ಕಟರ್, ಸ್ಟೀಲ್ ಸ್ಕೇಲ್ ಹಾಗೂ ಹಸಿರು ಜೆಲ್ ಪೆನ್ ಬಳಸಿ ನೋಟುಗಳನ್ನು ತಯಾರಿಸುತ್ತಿದ್ದರು. ಈಗಾಗಲೇ ಇವರು 100 ರೂ. ಮುಖಬೆಲೆಯ ನಕಲಿ ನೋಟನ್ನು ದೇವರಾಜ ಎಂಬ ಎಗ್ರೈಸ್ ವ್ಯಾಪಾರಿಗೆ ಹಾಗೂ 200 ರೂ. ನೋಟನ್ನು ಹಣ್ಣಿನ ವ್ಯಾಪಾರಿಗೆ ನೀಡಿ ಚಲಾವಣೆ ಮಾಡಿದ್ದರು ಎಂಬುದು ತನಿಖೆಯಲ್ಲಿ ಸಾಬೀತಾಗಿತ್ತು.
ಪೊಲೀಸರು ದಾಳಿ ವೇಳೆ ಪ್ರಿಂಟರ್, ಮೊಬೈಲ್ ಫೋನ್ಗಳು ಹಾಗೂ 120 ಎ4 ಸೈಜ್ ಪೇಪರ್ಗಳನ್ನು ಜಪ್ತು ಮಾಡಿದ್ದರು. ಸರ್ಕಾರದ ಪರವಾಗಿ ವಕೀಲ ಕೆ. ಜಯಪ್ಪ ವಾದ ಮಂಡಿಸಿದ್ದರು. ಆರೋಪಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಅವಧಿಯನ್ನು ಶಿಕ್ಷಾ ಅವಧಿಯಲ್ಲಿ ಕಡಿತಗೊಳಿಸಿ (ಸೆಟ್ ಆಫ್) ನ್ಯಾಯಾಲಯ ಆದೇಶಿಸಿದೆ. ತನಿಖೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಎಸ್ಪಿ ಡಾ. ಎಚ್.ಟಿ. ಶೇಖರ್ ಶ್ಲಾಘಿಸಿದ್ದಾರೆ.



