ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 40 ಟನ್ ಮರಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ
ಬೀರಗೊಂಡನಹಳ್ಳಿಯ ಎರಡನೇ ಕ್ವಾರಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ವಶಪಡಿಸಿಕೊಂಡ ಮರಳನ್ನು ನಾಲ್ಕು ಲಾರಿಗಳ ಮೂಲಕ ಹೊನ್ನಾಳಿಯ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದೆ.
ತಾಲ್ಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ಸಹಿಸುವುದಿಲ್ಲ. ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು.
-ತಹಶೀಲ್ದಾರ್ ಸಿ. ರಾಜೇಶ್ ಕುಮಾರ್
ಈ ಕಾರ್ಯಾಚರಣೆ ತಙಡದಲ್ಪಿ ಸಾಸ್ವೆಹಳ್ಳಿ ಹೋಬಳಿಯ ಕಂದಾಯ ನಿರೀಕ್ಷಕ ದಿನೇಶ್ ಬಾಬು, ಗ್ರಾಮ ಆಡಳಿತಾಧಿಕಾರಿಗಳಾದ ಸಂತೋಷ್ ಕುಮಾರ್ ವೈ.ಎನ್, ಉಮೇಶ್ ಹಾಗೂ ಪೊಲೀಸ್ ಸಿಬ್ಬಂದಿ ದೇವರಾಜ್ ಇದ್ದರು.
‘



