ದಾವಣಗೆರೆ: ಒಂಟಿ ಮಹಿಳೆ ಮನೆಗೆ ರಾತ್ರಿ ವೇಳೆ ನುಗ್ಗಿ ಅತ್ಯಾಚಾರ ಎಸಗಿದ ಅಪರಾಧಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷ ಜೈಲು ಹಾಗೂ 31,000 ದಂಡ ವಿಧಿಸಿದೆ.
ದಾವಣಗೆರೆ ಸಹಿತ 20 ಜಿಲ್ಲೆಯಲ್ಲಿ ಮೇ 7ರ ವರೆಗೆ ಭಾರಿ ಮಳೆ ಮುನ್ಸೂಚನೆ
ರಾಜಕುಮಾರ್ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಆದೇಸ ನೀಡಿದ್ದಾರೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.
ವಾಣಿಜ್ಯ ಸಿಲಿಂಡರ್ ದರ ಭರ್ಜರಿ ಏರಿಕೆ; ಏಕಾಏಕಿ 993 ರೂ. ಬೆಲೆ ಹೆಚ್ಚಳ; ಹೋಟೆಲ್ ನೇರ ಬಿಸಿ
2024ರ ಫೆ.5ರಂದು ರಾತ್ರಿ 11ಕ್ಕೆ ಮನೆಗೆ ನುಗ್ಗಿದ ಅಪರಾಧಿ ಅತ್ಯಾಚಾರ ಎಸಗಿದ್ದ ಎಂದು ಮಹಿಳೆಯೊಬ್ಬರು ಹದಡಿ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ರಾಘವೇಂದ್ರ ಕೆ.ಎನ್. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಎ.ಎಂ. ಬಸವರಾಜ್ ಸರ್ಕಾರದ ಪರ ವಾದ ಮಂಡಿಸಿದ್ದರು.



