ದಾವಣಗೆರೆ: ನಗರದ ಹೊರ ವಲಯದ ನಗರದ ಶಾಮನೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.
ದಾವಣಗೆರೆ: ಅವಧಿ ಮುಗಿದರೂ ಚೀಟಿ ಹಣ ಪಾವತಿಸದೆ ಸೇವಾ ನ್ಯೂನತೆ ತೋರಿದ ಸಂಸ್ಥೆಗೆ 35 ಸಾವಿರ ದಂಡ
ದಾವಣಗೆರೆ ನಗರದ ನಿವಾಸಿಗಳಾದ ಗೌತಮ್ (29) ಮನೋಜ್ (29) ಸಾವನ್ನಪ್ಪಿದ ಯುವಕರು. ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಅತಿ ವೇಗದ ಕಾರು ಚಾಲನೆಯೇ ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ಎರಡು ಕಾರುಗಳು ಕೂಡ ಸಂಪೂರ್ಣ ಜಖಂಗೊಂಡಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ: ಸಾರ್ವಜನಿಕರಿಂದ ಅಧಿಕ ಹಣ ವಸೂಲಿ; ಮಹಾನಗರ ಪಾಲಿಕೆ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ



