ದಾವಣಗೆರೆ: ಬೈಕ್ ನಲ್ಲಿ ಹೋಗುತ್ತಿದ್ದವರ ಮೇಲೆ ಕಣ್ಣಿಗೆ ಕಾರದಪುಡಿ ಎರಚಿ ಸರಗಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧನ ಮಾಡಿದ್ದಾರೆ.
ದಾವಣಗೆರೆ: ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಮನೆ ಕಳ್ಳತನ ಆರೋಪಿಗಳ ಬಂಧನ- 58.10 ಲಕ್ಷ ಮೌಲ್ಯದ ಸ್ವತ್ತು ವಶ
ದಿನಾಂಕ:27-04-2026 ರಂದು ಸಂಜೆ ಜಗಳೂರು ತಾಲ್ಲೂಕು ರಂಗಯ್ಯನದುರ್ಗ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಪಲ್ಲಾಗಟ್ಟೆ-ಮಲೇಮಾಚಿಕೆರೆ ರಸ್ತೆಯಲ್ಲಿ ಯರ್ಲಕಟ್ಟೆ ಗ್ರಾಮದ ರೇವಣ್ಣ ತನ್ನ ಹೆಂಡತಿಯೊಂದಿಗೆ ಮೋಟಾರ್ ಬೈಕಿನಲ್ಲಿ ಹೋಗುವಾಗ ಯಾರೋ ಇಬ್ಬರು ಕಣ್ಣಿಗೆ ಕಾರದಪುಡಿ ಎರಚಿದ್ದು, ಹೆಂಡತಿ ಕೊರಳಲ್ಲಿದ್ದ ಬಂಗಾರದ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದಾಗ ಅದರಲ್ಲಿ ಸುಮಾರು 10 ಗ್ರಾಂ ನಷ್ಟು ಬಂಗಾರದ ಎಳೆಯ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂಬ ದೂರಿನ ಮೇರೆಗೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದ ಆರೋಪಿತರ ಪತ್ತೆಗಾಗಿ ಡಿವೈಎಸ್ಪಿ ಬಿ ಎಸ್ ಬಸವರಾಜ್ ಮಾರ್ಗದರ್ಶನದಲ್ಲಿ ಬಿಳಿಚೋಡು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸೈಯದ್ ದಾದಾ ನೂರ್ ಅಹ್ಮದ್ ಹಾಗೂ ಸಿಬ್ಬಂದಿಗಳ ತಂಡ ಸದರಿ ಮೇಲ್ಕಂಡ ಪ್ರಕರಣದಲ್ಲಿನ ಆರೋಪಿತರುಗಳಾದ 1] ಮನೋಜ್ @ ಮನು ಎಂ, 28 ವರ್ಷ, ಅಜ್ಜಂಪುರ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ.. 2] ರಮೇಶ, 48 ವರ್ಷ, ಅಜ್ಜಂಪುರ ತಾಲ್ಲೂಕು ಚಿಕ್ಕಮಗಳೂರು ಜಿಲ್ಲೆ ಇವರುಗಳನ್ನು ಬಂಧಿಸಿದ್ದು, ಆರೋಪಿತರುಗಳಿಂದ ಮೇಲ್ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಸರಗಳ್ಳತನ ಪ್ರಕರಣದಲ್ಲಿ ಆರೋಪಿತರುಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಿಳಿಚೋಡು ಪೊಲೀಸ್ ಠಾಣೆಯ ಪಿ ಐ ಸೈಯದ್ ದಾದಾ ನೂರ್ ಅಹ್ಮದ್ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಆರ್ ಎ,, ಬಸವರಾಜ್ ಜಿ, ಜೆ,, ಭೋವಿ ಹನುಮಂತಪ್ಪ, ಪ್ರವೀಣ್ ಕುಮಾರ ಕುರಿ, ರಾಜು ಕೊಡದರ ಅವರನ್ನು ಎಸ್ಪಿ ಶೇಖರ್ ಹೆಚ್ ಟಿ., ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


